ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲು ಪರಿಚಾರಕರಿಗೆ ಕಾವಿ ಸಮವಸ್ತ್ರ: ಸಾಧುಗಳ ಆಕ್ಷೇಪ

Last Updated 22 ನವೆಂಬರ್ 2021, 17:09 IST
ಅಕ್ಷರ ಗಾತ್ರ

ಉಜ್ಜಯಿನಿ,ಮಧ್ಯಪ್ರದೇಶ: ‘ರಾಮಾಯಣ ಎಕ್ಸ್‌ಪ್ರೆಸ್‌’ ರೈಲಿನ ಪರಿಚಾರಕರ ಕಾವಿ ಬಣ್ಣದ ಸಮವಸ್ತ್ರಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಉಜ್ಜಯಿನಿಯ ಸಂತರು, ಸಮವಸ್ತ್ರವನ್ನು ಹಿಂಪಡೆಯದಿದ್ದರೆ ಡಿಸೆಂಬರ್‌ 12ರಂದು ದೆಹಲಿಯಲ್ಲಿ ರೈಲು ತಡೆ ನಡೆಸಲಾಗುವುದು ಎಂದು ಸೋಮವಾರ ಎಚ್ಚರಿಕೆ ನೀಡಿದ್ದಾರೆ.

ಕೇಸರಿ ಬಣ್ಣದ ಸಮವಸ್ತ್ರ ಧರಿಸುವ ಮೂಲಕ ಹಿಂದೂ ಧರ್ಮಕ್ಕೆ ಅವಹೇಳನ ಮಾಡಲಾಗಿದೆ ಎಂದೂ ಆರೋಪಿಸಿದ್ದಾರೆ.

‘ರೈಲಿನ ಸಿಬ್ಬಂದಿ ಕೇಸರಿ ಸಮವಸ್ತ್ರ ಧರಿಸಿ ಆಹಾರ ಪೂರೈಸುತ್ತಿರುವ ಬಗ್ಗೆ ಕೇಂದ್ರ ರೈಲ್ವೆ ಸಚಿವರಿಗೆ ಪತ್ರ ಬರೆದಿದ್ದೇವೆ. ಪರಿಚಾರಕರು, ಸಾಧುಗಳು ಧರಿಸುವಂತಹ ಕೇಸರಿ ಬಣ್ಣದ ಬಟ್ಟೆ ಹಾಗೂ ರುದ್ರಾಕ್ಷಿ ಮಾಲೆಯನ್ನು ಧರಿಸುವ ಮೂಲಕ ಸಾಧುಗಳಿಗೆ ಅವಮಾನ ಮಾಡಿದ್ದಾರೆ’ ಎಂದು ಉಜ್ಜಯಿನಿಯ ಅಖಾಡ ಪರಿಷತ್‌ನ ಮಾಜಿ ಪ್ರಧಾನ ಕಾರ್ಯದರ್ಶಿ ಅವದೇಶ್‌ಪುರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT