ಮಹಾರಾಷ್ಟ್ರದ ಸಂಸ್ಥಾಪನಾ ದಿನದ ಅಂಗವಾಗಿ ಭಾನುವಾರ ಪುಣೆಯಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು, 'ಮಹಾರಾಷ್ಟ್ರ ಸಂಸ್ಥಾಪನೆಯ 62ನೇ ವರ್ಷದ ಸಂಭ್ರಮ ಆಚರಿಸುತ್ತಿದ್ದೇವೆ. ಆದರೆ ಮರಾಠಿ ಮಾತನಾಡುವವರು ಇರುವ ಕರ್ನಾಟಕದ ಬೀದರ್, ಭಾಲ್ಕಿ, ಬೆಳಗಾವಿ, ಕಾರವಾರ, ನಿಪ್ಪಾಣಿ ಮತ್ತು ಇತರೆ ಜಿಲ್ಲೆಗಳ ಗ್ರಾಮಗಳನ್ನು ರಾಜ್ಯದ ಜೊತೆ ವಿಲೀನಗೊಳಿಸಲಾಗದಿರುವುದಕ್ಕೆ ಪಶ್ಚಾತ್ತಾಪವಿದೆ' ಎಂದು ಹೇಳಿದರು.