<p class="title"><strong>ನವದೆಹಲಿ: </strong>ಲಕ್ಷ್ಮದ್ವೀಪ ಕ್ಷೇತ್ರದ ಸಂಸದರ ಅನರ್ಹತೆ ವಿಷಯದಲ್ಲಿ ಕಾನೂನು ಪ್ರಕಾರವೇ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಚುನಾವಣಾ ಆಯೋಗವು ಶುಕ್ರವಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.</p>.<p class="title">ಕೊಲೆಯತ್ನ ಪ್ರಕರಣದಲ್ಲಿ ಸಂಸದ ಮೊಹಮ್ಮದ್ ಫೈಝಲ್ ಅವರಿಗೆ ವಿಧಿಸಲಾಗಿದ್ದ ಶಿಕ್ಷೆ ಆದೇಶವನ್ನು ಕೇರಳ ಹೈಕೋರ್ಟ್ ಅಮಾನತುಪಡಿಸಿದೆ ಎಂಬುದನ್ನು ಗಮನಿಸಲಾಗುವುದು ಎಂದು ಆಯೋಗವು ತಿಳಿಸಿತು.</p>.<p class="title">ಲಕ್ಷ್ಮದ್ವೀಪ ಕ್ಷೇತ್ರಕ್ಕೆ ಉಪಚುನಾವಣೆ ಕುರಿತು ಪತ್ರಿಕಾ ಹೇಳಿಕೆ ನೀಡಿದ್ದ ಚುನಾವಣಾ ಆಯೋಗದ ಕ್ರಮವನ್ನು ಪ್ರಶ್ನಿಸಿ ಫೈಜಲ್ ಮೇಲ್ಮನವಿ ಸಲ್ಲಿಸಿದ್ದರು. ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದ ಆಧಾರದಲ್ಲಿ ಆಯೋಗವು ಉಪ ಚುನಾವಣೆಯನ್ನು ಘೋಷಿಸಿತ್ತು.</p>.<p class="title">ಫೈಝಲ್ ಪರ ವಕೀಲ ಕಪಿಲ್ ಸಿಬಲ್ ಅವರು, ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಈಗ ಉಪಚುನಾವಣೆ ನಡೆಸಲಾಗದು ಎಂದು ಪ್ರತಿಪಾದಿಸಿದರು. ಆಗ ಆಯೋಗ ಕಾಯ್ದೆಯಂತೆ ಕ್ರಮವಹಿಸಲಿದೆ ಎಂದು ಆಯೋಗದ ಪರ ವಕೀಲ ಮಣಿಂದರ್ ಸಿಂಗ್ ಹೇಳಿದರು. ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್, ಬಿ.ವಿ.ನಾಗರತ್ನ ಅವರಿದ್ದ ಪೀಠ ಇದನ್ನು ಪರಿಗಣಿಸಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ: </strong>ಲಕ್ಷ್ಮದ್ವೀಪ ಕ್ಷೇತ್ರದ ಸಂಸದರ ಅನರ್ಹತೆ ವಿಷಯದಲ್ಲಿ ಕಾನೂನು ಪ್ರಕಾರವೇ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಚುನಾವಣಾ ಆಯೋಗವು ಶುಕ್ರವಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.</p>.<p class="title">ಕೊಲೆಯತ್ನ ಪ್ರಕರಣದಲ್ಲಿ ಸಂಸದ ಮೊಹಮ್ಮದ್ ಫೈಝಲ್ ಅವರಿಗೆ ವಿಧಿಸಲಾಗಿದ್ದ ಶಿಕ್ಷೆ ಆದೇಶವನ್ನು ಕೇರಳ ಹೈಕೋರ್ಟ್ ಅಮಾನತುಪಡಿಸಿದೆ ಎಂಬುದನ್ನು ಗಮನಿಸಲಾಗುವುದು ಎಂದು ಆಯೋಗವು ತಿಳಿಸಿತು.</p>.<p class="title">ಲಕ್ಷ್ಮದ್ವೀಪ ಕ್ಷೇತ್ರಕ್ಕೆ ಉಪಚುನಾವಣೆ ಕುರಿತು ಪತ್ರಿಕಾ ಹೇಳಿಕೆ ನೀಡಿದ್ದ ಚುನಾವಣಾ ಆಯೋಗದ ಕ್ರಮವನ್ನು ಪ್ರಶ್ನಿಸಿ ಫೈಜಲ್ ಮೇಲ್ಮನವಿ ಸಲ್ಲಿಸಿದ್ದರು. ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದ ಆಧಾರದಲ್ಲಿ ಆಯೋಗವು ಉಪ ಚುನಾವಣೆಯನ್ನು ಘೋಷಿಸಿತ್ತು.</p>.<p class="title">ಫೈಝಲ್ ಪರ ವಕೀಲ ಕಪಿಲ್ ಸಿಬಲ್ ಅವರು, ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಈಗ ಉಪಚುನಾವಣೆ ನಡೆಸಲಾಗದು ಎಂದು ಪ್ರತಿಪಾದಿಸಿದರು. ಆಗ ಆಯೋಗ ಕಾಯ್ದೆಯಂತೆ ಕ್ರಮವಹಿಸಲಿದೆ ಎಂದು ಆಯೋಗದ ಪರ ವಕೀಲ ಮಣಿಂದರ್ ಸಿಂಗ್ ಹೇಳಿದರು. ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್, ಬಿ.ವಿ.ನಾಗರತ್ನ ಅವರಿದ್ದ ಪೀಠ ಇದನ್ನು ಪರಿಗಣಿಸಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>