ಫೈಝಲ್ ಪರ ವಕೀಲ ಕಪಿಲ್ ಸಿಬಲ್ ಅವರು, ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಈಗ ಉಪಚುನಾವಣೆ ನಡೆಸಲಾಗದು ಎಂದು ಪ್ರತಿಪಾದಿಸಿದರು. ಆಗ ಆಯೋಗ ಕಾಯ್ದೆಯಂತೆ ಕ್ರಮವಹಿಸಲಿದೆ ಎಂದು ಆಯೋಗದ ಪರ ವಕೀಲ ಮಣಿಂದರ್ ಸಿಂಗ್ ಹೇಳಿದರು. ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್, ಬಿ.ವಿ.ನಾಗರತ್ನ ಅವರಿದ್ದ ಪೀಠ ಇದನ್ನು ಪರಿಗಣಿಸಿತು.