ಭೋಪಾಲ್: ‘ಆದ್ಯತೆಯ ಗುಂಪುಗಳಿಗೆ ಕೋವಿಡ್ ಲಸಿಕೆ ನೀಡಿದ ಬಳಿಕ ನಾನು ಲಸಿಕೆ ಪಡೆಯುತ್ತೇನೆ’ ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸೋಮವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಅವರು, ‘ಮಧ್ಯಪ್ರದೇಶದ ಎಲ್ಲಾ ಜಿಲ್ಲೆಗಳು ಲಸಿಕೆಗಾಗಿ ಸಿದ್ಧವಾಗಿದೆ’ ಎಂದು ಹೇಳಿದರು.
‘ಲಸಿಕೆ ನೀಡಲು ಅಗತ್ಯ ಸಿದ್ಧತೆಗಳು ಆಗಿವೆ. ಸದ್ಯ ನಾನು ಲಸಿಕೆ ತೆಗೆದುಕೊಳ್ಳುವುದಿಲ್ಲ. ಆದ್ಯತೆ ಗುಂಪುಗಳಿಗೆ ಪ್ರಥಮ ಪ್ರಾತಿನಿಧ್ಯ. ಬಳಿಕ ನಾನು ಸ್ವೀಕರಿಸುತ್ತೇನೆ’ ಎಂದು ಅವರು ಈ ಸಂಬಂಧ ಟ್ವೀಟ್ ಮಾಡಿದ್ದಾರೆ.
ಆಕ್ಸ್ಫರ್ಡ್ ಅಭಿವೃದ್ಧಿಪಡಿಸಿರುವ ಕೋವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆ ಅಭಿವೃದ್ಧಿಪಡಿಸಿರುವ ಕೋವ್ಯಾಕ್ಸಿನ್ನ ತುರ್ತು ಮತ್ತು ನಿರ್ಬಂಧಿತ ಬಳಕೆಗೆ ಭಾರತೀಯ ಔಷಧ ನಿಯಂತ್ರಕ ಸಂಸ್ಥೆಯು ಭಾನುವಾರ ಅನುಮೋದನೆ ನೀಡಿದೆ.
#WATCH ...I have decided that I will not get vaccinated for now, first it should be administered to others. My turn should come afterwards, we have to work to ensure that priority groups are administered with the vaccine: Madhya Pradesh Chief Minister Shivraj Singh Chouhan pic.twitter.com/EGbkb70iz2