ಟಿಆರ್ಎಸ್ ಸಂಸ್ಥಾಪಕ ಕೆ ಚಂದ್ರಶೇಖರ್ ರಾವ್ ಅವರು ತಮ್ಮ ಪಕ್ಷವನ್ನು ‘ಭಾರತ ರಾಷ್ಟ್ರ ಸಮಿತಿ’ ಎಂದು ಮರುನಾಮಕರಣ ಮಾಡಿರುವ ನಿರ್ಧಾರದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾಹುಲ್ ಗಾಂಧಿ, ‘ರಾಷ್ಟ್ರೀಯ ಅಥವಾ ಅಂತರರಾಷ್ಟ್ರೀಯ ಪಕ್ಷವನ್ನು ಮುನ್ನಡೆಸುವ ಕನಸು ಕಾಣಲು ತೆಲಂಗಾಣ ಮುಖ್ಯಮಂತ್ರಿ ಸರ್ವ ಸ್ವತಂತ್ರರು’ ಎಂದು ವ್ಯಂಗ್ಯವಾಡಿದರು.