<p class="title"><strong>ಲಖನೌ: </strong>‘ಮೋದಿ ಹೈ ತೊ ಮಮ್ಕಿನ್ ಹೈ (ಮೋದಿ ಇದ್ದರೆ ಎಲ್ಲವೂ ಸಾಧ್ಯ) ಎಂಬುದು ಜಗತ್ತಿನ ಘೋಷಣೆಯಾಗಿದೆ’ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಭಾನುವಾರ ಇಲ್ಲಿ ನಡೆದ ರಾಜ್ಯ ಬಿಜೆಪಿ ಕಾರ್ಯಕಾರಿ ಸಭೆಯಲ್ಲಿ ಹೇಳಿದರು. ಈ ಮೂಲಕ 2024ರ ಲೋಕಸಭಾ ಚುನಾವಣೆಯು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆಯಲಿದೆ ಎಂಬ ಸುಳಿವು ನೀಡಿದರು. </p>.<p class="title">ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ಸಾಧನೆಗಳನ್ನು ಪಟ್ಟಿ ಮಾಡಿದ ಅವರು, ಜಿ20ಯ ಅಧ್ಯಕ್ಷತೆ ಭಾರತಕ್ಕೆ ಸಿಕ್ಕಿರುವುದು, ದೇಶದ ಆರ್ಥಿಕತೆಯಲ್ಲಿ ಬೆಳವಣಿಗೆ ಕಾಣುತ್ತಿರುವುದು ಮೋದಿ ಅವರ ಆಡಳಿತದಲ್ಲಿ ಎಲ್ಲವೂ ಸಾಧ್ಯ ಎಂಬುದಕ್ಕೆ ನಿದರ್ಶನ ಎಂದರು. </p>.<p class="title">ಮುಂಬರಲಿರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯು ರಾಜ್ಯದಲ್ಲಿ ಎಲ್ಲಾ 80 ಸ್ಥಾನಗಳನ್ನೂ ಗೆಲ್ಲಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಭೂಪೇಂದ್ರ ಚೌಧರಿ ಈ ವೇಳೆ ಹೇಳಿದರು.</p>.<p class="Subhead"><strong>ಬಿಜೆಪಿ ಶೂನ್ಯ ಸಂಪಾದಿಸಲಿದೆ: </strong> ಬಿಜೆಪಿಯ ಹೇಳಿಕೆಗೆ ಭಿನ್ನವಾದ ಹೇಳಿಕೆಯನ್ನು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಅವರು ನೀಡಿದ್ದಾರೆ. 2024 ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ ಸ್ಥಾನಗಳನ್ನೂ ಕಳೆದುಕೊಳ್ಳಲಿದೆ ಎಂದಿದ್ದಾರೆ.</p>.<p class="title">ಬಿಜೆಪಿಯು ಉದ್ಯಮಿಗಳ ಪರವಾಗಿ, ಖಾಸಗೀಕರಣದ ಪರವಾಗಿ ಕೆಲಸ ಮಾಡುತ್ತಿದೆ. ಬೆಲೆ ಏರಿಕೆ ಜನರ ಕಂಗೆಡಿಸಿದೆ ಎಂದು ಅಖಿಲೇಶ್ ಭಾನುವಾರ ಸುದ್ದಿಗಾರರ ಎದುರು ಹೇಳಿದರು.</p>.<p class="title">ಪೊಲೀಸ್ ಬಂಧನದಲ್ಲಿರುವಾಗಿನ ಹತ್ಯೆ ಪ್ರಕರಣಗಳು ಹೆಚ್ಚಾಗಿವೆ. ಈ ಬಗ್ಗೆ ತಿಳಿಯಲು ಪಕ್ಷದ ನಾಯಕರು ವೈದ್ಯಕೀಯ ಕಾಲೇಜುಗಳಿಗೆ ತೆರಳಿ ಪರಿಶೀಲನೆ ನಡೆಸಬೇಕು. ಆಗ ಬಿಜೆಪಿ ಎಷ್ಟು ಸ್ಥಾನಗಳನ್ನು ಗೆಲ್ಲಲಿದೆ ಎಂದು ನಾಯಕರಿಗೆ ಮನವರಿಕೆಯಾಗುತ್ತದೆ ಎಂದರು.</p>.<p class="title">ಬಿಜೆಪಿಗೆ ದಿನಗಣನೆ ಆರಂಭವಾಗಿದೆ. ಇನ್ನು 398 ದಿನಗಳು ಮಾತ್ರ ಬಾಕಿ ಇವೆ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಲಖನೌ: </strong>‘ಮೋದಿ ಹೈ ತೊ ಮಮ್ಕಿನ್ ಹೈ (ಮೋದಿ ಇದ್ದರೆ ಎಲ್ಲವೂ ಸಾಧ್ಯ) ಎಂಬುದು ಜಗತ್ತಿನ ಘೋಷಣೆಯಾಗಿದೆ’ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಭಾನುವಾರ ಇಲ್ಲಿ ನಡೆದ ರಾಜ್ಯ ಬಿಜೆಪಿ ಕಾರ್ಯಕಾರಿ ಸಭೆಯಲ್ಲಿ ಹೇಳಿದರು. ಈ ಮೂಲಕ 2024ರ ಲೋಕಸಭಾ ಚುನಾವಣೆಯು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆಯಲಿದೆ ಎಂಬ ಸುಳಿವು ನೀಡಿದರು. </p>.<p class="title">ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ಸಾಧನೆಗಳನ್ನು ಪಟ್ಟಿ ಮಾಡಿದ ಅವರು, ಜಿ20ಯ ಅಧ್ಯಕ್ಷತೆ ಭಾರತಕ್ಕೆ ಸಿಕ್ಕಿರುವುದು, ದೇಶದ ಆರ್ಥಿಕತೆಯಲ್ಲಿ ಬೆಳವಣಿಗೆ ಕಾಣುತ್ತಿರುವುದು ಮೋದಿ ಅವರ ಆಡಳಿತದಲ್ಲಿ ಎಲ್ಲವೂ ಸಾಧ್ಯ ಎಂಬುದಕ್ಕೆ ನಿದರ್ಶನ ಎಂದರು. </p>.<p class="title">ಮುಂಬರಲಿರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯು ರಾಜ್ಯದಲ್ಲಿ ಎಲ್ಲಾ 80 ಸ್ಥಾನಗಳನ್ನೂ ಗೆಲ್ಲಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಭೂಪೇಂದ್ರ ಚೌಧರಿ ಈ ವೇಳೆ ಹೇಳಿದರು.</p>.<p class="Subhead"><strong>ಬಿಜೆಪಿ ಶೂನ್ಯ ಸಂಪಾದಿಸಲಿದೆ: </strong> ಬಿಜೆಪಿಯ ಹೇಳಿಕೆಗೆ ಭಿನ್ನವಾದ ಹೇಳಿಕೆಯನ್ನು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಅವರು ನೀಡಿದ್ದಾರೆ. 2024 ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ ಸ್ಥಾನಗಳನ್ನೂ ಕಳೆದುಕೊಳ್ಳಲಿದೆ ಎಂದಿದ್ದಾರೆ.</p>.<p class="title">ಬಿಜೆಪಿಯು ಉದ್ಯಮಿಗಳ ಪರವಾಗಿ, ಖಾಸಗೀಕರಣದ ಪರವಾಗಿ ಕೆಲಸ ಮಾಡುತ್ತಿದೆ. ಬೆಲೆ ಏರಿಕೆ ಜನರ ಕಂಗೆಡಿಸಿದೆ ಎಂದು ಅಖಿಲೇಶ್ ಭಾನುವಾರ ಸುದ್ದಿಗಾರರ ಎದುರು ಹೇಳಿದರು.</p>.<p class="title">ಪೊಲೀಸ್ ಬಂಧನದಲ್ಲಿರುವಾಗಿನ ಹತ್ಯೆ ಪ್ರಕರಣಗಳು ಹೆಚ್ಚಾಗಿವೆ. ಈ ಬಗ್ಗೆ ತಿಳಿಯಲು ಪಕ್ಷದ ನಾಯಕರು ವೈದ್ಯಕೀಯ ಕಾಲೇಜುಗಳಿಗೆ ತೆರಳಿ ಪರಿಶೀಲನೆ ನಡೆಸಬೇಕು. ಆಗ ಬಿಜೆಪಿ ಎಷ್ಟು ಸ್ಥಾನಗಳನ್ನು ಗೆಲ್ಲಲಿದೆ ಎಂದು ನಾಯಕರಿಗೆ ಮನವರಿಕೆಯಾಗುತ್ತದೆ ಎಂದರು.</p>.<p class="title">ಬಿಜೆಪಿಗೆ ದಿನಗಣನೆ ಆರಂಭವಾಗಿದೆ. ಇನ್ನು 398 ದಿನಗಳು ಮಾತ್ರ ಬಾಕಿ ಇವೆ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>