ಇದೇ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಭಾವನಾತ್ಮಕವಾಗಿ ಪತ್ರ ಬರೆದಿರುವ ಎಲ್ಜೆಪಿ ಅಧ್ಯಕ್ಷ ಚಿರಾಗ್ ಪಾಸ್ವಾನ್, ‘ಕೋವಿಡ್–19 ಸಂದರ್ಭದಲ್ಲಿ ಆಹಾರ ಸಚಿವರಾಗಿರುವ ನನ್ನ ತಂದೆ ಕಳೆದ ಐದು ತಿಂಗಳಿಂದ ಬಡವರಿಗೆ ಮತ್ತು ಅಗತ್ಯವಿದ್ದವರಿಗೆ ಪಡಿತರ ತಲುಪುವಂತೆ ನೋಡಿಕೊಳ್ಳುವುದರಲ್ಲಿ ನಿರತರಾಗಿದ್ದರು. ಈ ಕಾರಣದಿಂದಾಗಿ, ಆರೋಗ್ಯದ ಮೇಲೆ ಗಮನಹರಿಸಲು ಅವರಿಗೆ ಸಾಧ್ಯವಾಗಿರಲಿಲ್ಲ. ಪ್ರಸ್ತುತ ಅವರು ದೆಹಲಿಯ ಆಸ್ಪತ್ರೆಯಲ್ಲಿ ಕಳೆದ ಮೂರು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಬಿಹಾರಕ್ಕೆ ಹೋಗುವ ಇಚ್ಛೆ ಇತ್ತು. ಅಲ್ಲಿ ಎನ್ಡಿಎ ಒಳಗಿನ ಸೀಟು ಹಂಚಿಕೆ ಚರ್ಚೆಯನ್ನು ಅಂತಿಮಗೊಳಿಸುವ ಬಯಕೆ ಇತ್ತು. ಆದರೆ ಅನಾರೋಗ್ಯದ ಕಾರಣದಿಂದ ಇದು ಸಾಧ್ಯವಾಗಲಿಲ್ಲ. ಈ ಸಂದರ್ಭದಲ್ಲಿ ನಾನೂ ಅವರನ್ನು ಏಕಾಂಗಿಯಾಗಿ ಬಿಟ್ಟು ಬರಲು ಸಾಧ್ಯವಿಲ್ಲ’ ಎಂದಿದ್ದಾರೆ.