ಲಖನೌ: ಬಿಜೆಪಿ ನಾಯಕರ ವಿರುದ್ಧ ದಾಖಲಿಸಲಾದ ಪ್ರಕರಣಗಳನ್ನು ಹಿಂದಕ್ಕೆ ಪಡೆದಂತೆ ಎಲ್ಲಾ ವಿರೋಧ ಪಕ್ಷಗಳ ನಾಯಕರ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ವಾಪಸು ಪಡೆಯಬೇಕು ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರು ಆಗ್ರಹಿಸಿದ್ದಾರೆ.
ಈ ಬಗ್ಗೆ ಶುಕ್ರವಾರ ಟ್ವೀಟ್ ಮಾಡಿರುವ ಅವರು, ವಿರೋಧ ಪಕ್ಷಗಳ ನಾಯಕರ ವಿರುದ್ಧವೂ ‘ರಾಜಕೀಯ ದುರುದ್ದೇಶ’ದ ಪ್ರಕರಣಗಳನ್ನು ದಾಖಲಿಸಲಾಗಿತ್ತು. ಹಾಗಾಗಿ ಈ ಪ್ರಕರಣಗಳನ್ನೂ ಹಿಂಪಡೆಯಬೇಕು’ ಎಂದು ಒತ್ತಾಯಿಸಿದ್ದಾರೆ.
ಕೇಂದ್ರ ಸರ್ಕಾರವು ಪ್ರತಿಭಟನಾ ನಿರತ ರೈತರೊಂದಿಗೆ ಸಹಾನುಭೂತಿಯಿಂದ ನಡೆದುಕೊಳ್ಳಬೇಕು. ಮೂರು ಹೊಸ ಕೃಷಿ ಕಾಯ್ದೆಗಳನ್ನು ರದ್ದುಪಡಿಸಬೇಕು ಎಂದು ಕಳೆದ ವಾರ ಮಾಯಾವತಿ ಅವರು ಒತ್ತಾಯಿಸಿದ್ದರು.
यू.पी. में बीजेपी के लोगों के ऊपर ’’राजनैतिक द्वेष’’ की भावना से दर्ज मुकदमे वापिस होने के साथ ही, सभी विपक्षी पार्टियो के लोगों पर भी ऐसे दर्ज मुकदमे भी जरूर वापिस होने चाहिए। बी.एस.पी की यह माँग।