<p><strong>ನವದೆಹಲಿ:</strong> ‘ಬಿಹಾರದಲ್ಲಿ ಮಹಿಳೆಯೊಬ್ಬರನ್ನು ಸಜೀವ ದಹನ ಮಾಡಲಾದ್ದು, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಚುನಾವಣಾ ಲಾಭಕ್ಕಾಗಿ ಈ ಕೃತ್ಯವನ್ನು ಮರೆಮಾಚುತ್ತಿದ್ದಾರೆ‘ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.</p>.<p>ಬಿಹಾರದ ವೈಶಾಲಿಯಲ್ಲಿ ಈ ಘಟನೆ ನಡೆದಿದೆ. ಚುನಾವಣೆ ವೇಳೆ ನಡೆದಿದ್ದರಿಂದ ಇದನ್ನು ಮುಚ್ಚಿಡಲಾಗಿದೆ ಎಂದು ರಾಹುಲ್ ಆರೋಪಿಸಿದ್ದಾರೆ. ‘15 ದಿನಗಳ ಕಾಲ ಆಕೆ ಸಾವು–ಬದುಕಿನ ನಡುವೆ ಹೋರಾಡಿ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದಿದ್ದಾರೆ‘ ಎಂದು ಮಾಧ್ಯಮವೊಂದು ವರದಿ ಮಾಡಿದ್ದು, ಆ ವರದಿಯ ತುಣಕನ್ನು ರಾಹುಲ್ ಟ್ವೀಟ್ ಪೋಸ್ಟ್ ಜತೆಗೆ ಹಂಚಿಕೊಂಡಿದ್ದಾರೆ.</p>.<p>‘ಈ ಘಟನೆಯಲ್ಲಿ ಯಾರ ಅಪರಾಧ ಹೆಚ್ಚು ಮತ್ತು ಅಪಾಯಕಾರಿ? ಇಂತಹ ಅಮಾನವೀಯ ಕೃತ್ಯ ಎಸಗಿದ ಆರೋಪಿಯದ್ದೇ ಅಥವಾ ಅಧಿಕಾರ ದುರುಪಯೋಗ ಮಾಡಿಕೊಂಡು, ಅಧಿಕಾರದ ಲಾಭಕ್ಕಾಗಿ ಈ ಕೃತ್ಯವನ್ನು ಮರೆಮಾಚಿದವರೇ’ ಎಂದು ರಾಹುಲ್ ಟ್ವೀಟ್ನಲ್ಲಿ ಪ್ರಶ್ನಿಸಿದ್ದಾರೆ.</p>.<p>ಮಹಿಳೆಯೊಬ್ಬರಿಗೆ ಆಕೆಯ ಗ್ರಾಮದ ವ್ಯಕ್ತಿಯೊಬ್ಬ ಕಿರುಕುಳ ನೀಡಿದ್ದಾನೆ. ಬಳಿಕ ಸ್ನೇಹಿತರೊಂದಿಗೆ ಸೇರಿ ಆಕೆಯನ್ನು ಸಜೀವ ದಹನ ಮಾಡಿದ್ದಾರೆ ಎಂದು ಮಾಧ್ಯಮ ವರದಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಬಿಹಾರದಲ್ಲಿ ಮಹಿಳೆಯೊಬ್ಬರನ್ನು ಸಜೀವ ದಹನ ಮಾಡಲಾದ್ದು, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಚುನಾವಣಾ ಲಾಭಕ್ಕಾಗಿ ಈ ಕೃತ್ಯವನ್ನು ಮರೆಮಾಚುತ್ತಿದ್ದಾರೆ‘ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.</p>.<p>ಬಿಹಾರದ ವೈಶಾಲಿಯಲ್ಲಿ ಈ ಘಟನೆ ನಡೆದಿದೆ. ಚುನಾವಣೆ ವೇಳೆ ನಡೆದಿದ್ದರಿಂದ ಇದನ್ನು ಮುಚ್ಚಿಡಲಾಗಿದೆ ಎಂದು ರಾಹುಲ್ ಆರೋಪಿಸಿದ್ದಾರೆ. ‘15 ದಿನಗಳ ಕಾಲ ಆಕೆ ಸಾವು–ಬದುಕಿನ ನಡುವೆ ಹೋರಾಡಿ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದಿದ್ದಾರೆ‘ ಎಂದು ಮಾಧ್ಯಮವೊಂದು ವರದಿ ಮಾಡಿದ್ದು, ಆ ವರದಿಯ ತುಣಕನ್ನು ರಾಹುಲ್ ಟ್ವೀಟ್ ಪೋಸ್ಟ್ ಜತೆಗೆ ಹಂಚಿಕೊಂಡಿದ್ದಾರೆ.</p>.<p>‘ಈ ಘಟನೆಯಲ್ಲಿ ಯಾರ ಅಪರಾಧ ಹೆಚ್ಚು ಮತ್ತು ಅಪಾಯಕಾರಿ? ಇಂತಹ ಅಮಾನವೀಯ ಕೃತ್ಯ ಎಸಗಿದ ಆರೋಪಿಯದ್ದೇ ಅಥವಾ ಅಧಿಕಾರ ದುರುಪಯೋಗ ಮಾಡಿಕೊಂಡು, ಅಧಿಕಾರದ ಲಾಭಕ್ಕಾಗಿ ಈ ಕೃತ್ಯವನ್ನು ಮರೆಮಾಚಿದವರೇ’ ಎಂದು ರಾಹುಲ್ ಟ್ವೀಟ್ನಲ್ಲಿ ಪ್ರಶ್ನಿಸಿದ್ದಾರೆ.</p>.<p>ಮಹಿಳೆಯೊಬ್ಬರಿಗೆ ಆಕೆಯ ಗ್ರಾಮದ ವ್ಯಕ್ತಿಯೊಬ್ಬ ಕಿರುಕುಳ ನೀಡಿದ್ದಾನೆ. ಬಳಿಕ ಸ್ನೇಹಿತರೊಂದಿಗೆ ಸೇರಿ ಆಕೆಯನ್ನು ಸಜೀವ ದಹನ ಮಾಡಿದ್ದಾರೆ ಎಂದು ಮಾಧ್ಯಮ ವರದಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>