‘ಯುವತಿಯ ಕಾಲು ಕಾರಿನ ಚಕ್ರವೊಂದರಲ್ಲಿ ಸಿಲುಕಿಕೊಂಡಿತ್ತು. ಆಕೆಯ ಮೃತದೇಹವನ್ನು ಸುಮಾರು 4 ಕಿ.ಮೀ. ವರೆಗೂ ಎಳೆದೊಯ್ಯಲಾಗಿದೆ. ಈ ಸಂಬಂಧ ದೀಪಕ್ ಖನ್ನಾ (26), ಅಮಿತ್ ಖನ್ನಾ (25), ಕೃಷ್ಣಾ (27), ಮಿಥುನ್ (26) ಮತ್ತು ಮನೋಜ್ ಮಿತ್ತಲ್ ಎಂಬುವರನ್ನು ಬಂಧಿಸಲಾಗಿದೆ. ಇವರ ವಿರುದ್ಧ ಐಪಿಸಿ ಸೆಕ್ಷನ್ 279 ಮತ್ತು 304–ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ’ ಎಂದು ಡಿಸಿಪಿ ಹರೇಂದ್ರಕುಮಾರ್ ಸಿಂಗ್ ಹೇಳಿದ್ದಾರೆ.