<p class="title"><strong>ಬುಕ್ಸರ್ (ಬಿಹಾರ):</strong> 30 ವರ್ಷದ ಮಹಿಳೆ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಏಳು ಜನರು, ಬಳಿಕ ಮಹಿಳೆಯ ಐದು ವರ್ಷದ ಪುತ್ರನನ್ನು ಕೊಂದಿರುವ ಕೃತ್ಯ ಬುಕ್ಸರ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p class="title">ಕೃತ್ಯಕ್ಕೆ ಸಂಬಂಧಿಸಿದಂತೆ ಮುನ್ನಿ ರಾಮ್ ಎಂಬಾತನನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವ ಇತರರಿಗಾಗಿ ಶೋಧ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಬ್ಯಾಂಕ್ ಖಾತೆಗೆ ಹಣ ಜಮೆ ಮಾಡಲು ಬಂದಿದ್ದ ಮಹಿಳೆಯನ್ನು ಆರೋಪಿಗಳು ಚೈಗೇನ್ ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಕೃತ್ಯ ಎಸಗಿದ್ದು, ಬಾಲಕನನ್ನು ಕೊಂದಿದ್ದಾರೆ ಎಂದು ಮುರರ್ ಠಾಣೆಗೆ ನೀಡಿರುವ ದೂರಿನಲ್ಲಿ ಮಹಿಳೆಯ ತಂದೆ ತಿಳಿಸಿದ್ದಾರೆ.</p>.<p>ಕೃತ್ಯದ ಬಳಿಕ ಆರೋಪಿಗಳು ಮಹಿಳೆ ಮತ್ತು ಆಕೆಯ ಪುತ್ರನನ್ನು ಹಗ್ಗದಿಂದ ಕಟ್ಟಿಹಾಕಿದ್ದು, ನಾಲೆಗೆ ಎಸೆದಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆ.</p>.<p>ಇಬ್ಬರನ್ನು ನಾಲೆಯಿಂದ ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆ ವೇಳೆಗೆ ಬಾಲಕ ಮೃತಪಟ್ಟಿದ್ದ. ಮಹಿಳೆಯನ್ನು ಸಾದರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಹಿಳೆಯ ವೈದ್ಯಕೀಯ ಪರೀಕ್ಷಾ ವರದಿಯನ್ನು ನಿರೀಕ್ಷಿಸಲಾಗಿದೆ. ಅವರ ಹೇಳಿಕೆಯನ್ನು ದಾಖಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಬುಕ್ಸರ್ (ಬಿಹಾರ):</strong> 30 ವರ್ಷದ ಮಹಿಳೆ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಏಳು ಜನರು, ಬಳಿಕ ಮಹಿಳೆಯ ಐದು ವರ್ಷದ ಪುತ್ರನನ್ನು ಕೊಂದಿರುವ ಕೃತ್ಯ ಬುಕ್ಸರ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p class="title">ಕೃತ್ಯಕ್ಕೆ ಸಂಬಂಧಿಸಿದಂತೆ ಮುನ್ನಿ ರಾಮ್ ಎಂಬಾತನನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವ ಇತರರಿಗಾಗಿ ಶೋಧ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಬ್ಯಾಂಕ್ ಖಾತೆಗೆ ಹಣ ಜಮೆ ಮಾಡಲು ಬಂದಿದ್ದ ಮಹಿಳೆಯನ್ನು ಆರೋಪಿಗಳು ಚೈಗೇನ್ ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಕೃತ್ಯ ಎಸಗಿದ್ದು, ಬಾಲಕನನ್ನು ಕೊಂದಿದ್ದಾರೆ ಎಂದು ಮುರರ್ ಠಾಣೆಗೆ ನೀಡಿರುವ ದೂರಿನಲ್ಲಿ ಮಹಿಳೆಯ ತಂದೆ ತಿಳಿಸಿದ್ದಾರೆ.</p>.<p>ಕೃತ್ಯದ ಬಳಿಕ ಆರೋಪಿಗಳು ಮಹಿಳೆ ಮತ್ತು ಆಕೆಯ ಪುತ್ರನನ್ನು ಹಗ್ಗದಿಂದ ಕಟ್ಟಿಹಾಕಿದ್ದು, ನಾಲೆಗೆ ಎಸೆದಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆ.</p>.<p>ಇಬ್ಬರನ್ನು ನಾಲೆಯಿಂದ ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆ ವೇಳೆಗೆ ಬಾಲಕ ಮೃತಪಟ್ಟಿದ್ದ. ಮಹಿಳೆಯನ್ನು ಸಾದರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಹಿಳೆಯ ವೈದ್ಯಕೀಯ ಪರೀಕ್ಷಾ ವರದಿಯನ್ನು ನಿರೀಕ್ಷಿಸಲಾಗಿದೆ. ಅವರ ಹೇಳಿಕೆಯನ್ನು ದಾಖಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>