<p><strong>ತಿರುನೆಲ್ವೇಲಿ</strong>: ಇಲ್ಲಿನ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ತಂದೆ ಮೃತಪಟ್ಟಿದ್ದರೂ, ಸ್ವಾತಂತ್ರ್ಯ ದಿನಾಚರಣೆಯ ಪಥಸಂಚಲನದಲ್ಲಿ ಪಾಲ್ಗೊಂಡು ನಂತರ ತಂದೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಗಮನ ಸೆಳೆದಿದ್ದಾರೆ.</p>.<p>ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಅಧಿಕಾರಿ ಎನ್.ಮಹೇಶ್ವರಿ ಎಂಬುವವರು ದುಃಖದ ಸಮಯದಲ್ಲಿಯೂ ಕರ್ತವ್ಯಪ್ರಜ್ಞೆ ಮೆರೆದಿದ್ದಾರೆ. ಜಿಲ್ಲೆಯಪಲಯಂಕೊಟ್ಟೈನ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಪಥಸಂಚಲನದ ನೇತೃತ್ವವನ್ನು ಅವರು ವಹಿಸಿದ್ದರು.</p>.<p>‘ಮಹೇಶ್ವರಿ ಅವರ ತಂದೆ ನಾರಾಯಣ ಸ್ವಾಮಿ (83) ಅವರು ಆ.14 ಶುಕ್ರವಾರ ತಡರಾತ್ರಿ ಮೃತಪಟ್ಟಿದ್ದರು. ಆದರೆ ಮಹೇಶ್ವರಿ ಅವರು ಮರುದಿನ ಬೆಳಿಗ್ಗೆ ಸ್ವಾತಂತ್ರ್ಯ ದಿನಾಚರಣೆಯ ಪಥಸಚಲನದಲ್ಲಿ ಪಾಲ್ಗೊಂಡು, ಕಾರ್ಯಕ್ರಮ ಮುಗಿದ ಬಳಿಕ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗಿಯಾದರು’ ಎಂದು ಪೊಲೀಸರು ತಿಳಿಸಿದರು.</p>.<p>‘ಮಹೇಶ್ವರಿಅವರು ತನ್ನ ದುಃಖವನ್ನು ಬದಿಗಿಟ್ಟು ಕರ್ತವ್ಯವನ್ನು ನಿಭಾಯಿಸಿದರು. ಇಂತಹ ಅಧಿಕಾರಿ ನಮ್ಮ ಇಲಾಖೆಯಲ್ಲಿರುವುದು ಹೆಮ್ಮೆಯ ವಿಷಯ’ ಎಂದು ಪೊಲೀಸ್ ಇಲಾಖೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುನೆಲ್ವೇಲಿ</strong>: ಇಲ್ಲಿನ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ತಂದೆ ಮೃತಪಟ್ಟಿದ್ದರೂ, ಸ್ವಾತಂತ್ರ್ಯ ದಿನಾಚರಣೆಯ ಪಥಸಂಚಲನದಲ್ಲಿ ಪಾಲ್ಗೊಂಡು ನಂತರ ತಂದೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಗಮನ ಸೆಳೆದಿದ್ದಾರೆ.</p>.<p>ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಅಧಿಕಾರಿ ಎನ್.ಮಹೇಶ್ವರಿ ಎಂಬುವವರು ದುಃಖದ ಸಮಯದಲ್ಲಿಯೂ ಕರ್ತವ್ಯಪ್ರಜ್ಞೆ ಮೆರೆದಿದ್ದಾರೆ. ಜಿಲ್ಲೆಯಪಲಯಂಕೊಟ್ಟೈನ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಪಥಸಂಚಲನದ ನೇತೃತ್ವವನ್ನು ಅವರು ವಹಿಸಿದ್ದರು.</p>.<p>‘ಮಹೇಶ್ವರಿ ಅವರ ತಂದೆ ನಾರಾಯಣ ಸ್ವಾಮಿ (83) ಅವರು ಆ.14 ಶುಕ್ರವಾರ ತಡರಾತ್ರಿ ಮೃತಪಟ್ಟಿದ್ದರು. ಆದರೆ ಮಹೇಶ್ವರಿ ಅವರು ಮರುದಿನ ಬೆಳಿಗ್ಗೆ ಸ್ವಾತಂತ್ರ್ಯ ದಿನಾಚರಣೆಯ ಪಥಸಚಲನದಲ್ಲಿ ಪಾಲ್ಗೊಂಡು, ಕಾರ್ಯಕ್ರಮ ಮುಗಿದ ಬಳಿಕ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗಿಯಾದರು’ ಎಂದು ಪೊಲೀಸರು ತಿಳಿಸಿದರು.</p>.<p>‘ಮಹೇಶ್ವರಿಅವರು ತನ್ನ ದುಃಖವನ್ನು ಬದಿಗಿಟ್ಟು ಕರ್ತವ್ಯವನ್ನು ನಿಭಾಯಿಸಿದರು. ಇಂತಹ ಅಧಿಕಾರಿ ನಮ್ಮ ಇಲಾಖೆಯಲ್ಲಿರುವುದು ಹೆಮ್ಮೆಯ ವಿಷಯ’ ಎಂದು ಪೊಲೀಸ್ ಇಲಾಖೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>