<p><strong>ಸುಲ್ತಾನ್ಪುರ: </strong>ನಕಲಿ ವೈದ್ಯರೊಬ್ಬರು ಶಸ್ತ್ರಚಿಕಿತ್ಸೆ ನೆರವೇರಿಸುತ್ತಿದ್ದ ವೇಳೆ ಮಹಿಳೆ ಮತ್ತು ಆಕೆಯ ನವಜಾತ ಶಿಶು ಮೃತಪಟ್ಟ ಘಟನೆ ಉತ್ತರಪ್ರದೇಶದ ಆಸ್ಪತ್ರೆಯೊಂದರಲ್ಲಿ ನಡೆದಿದೆ.</p>.<p>‘ಈ ಪ್ರಕರಣ ಸಂಬಂಧ ನಕಲಿ ವೈದ್ಯ ಮತ್ತು ಆಸ್ಪತ್ರೆಯ ಕಾರ್ಯನಿರ್ವಾಹಕನನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಪೂನಂ (35) ಎಂಬ ಮಹಿಳೆಗೆ ಗುರುವಾರ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ದೀಹ ಗ್ರಾಮದಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು.ರಾಜೇಂದ್ರ ಕುಮಾರ್ ಶುಕ್ಲಾ ಎಂಬುವವರು ಶಸ್ತ್ರಚಿಕಿತ್ಸೆ ನೆರವೇರಿಸುತ್ತಿದ್ದ ಸಮಯದಲ್ಲಿ ಮಗು ಮತ್ತು ತಾಯಿ ಮೃತಪಟ್ಟಿದ್ದಾರೆ’ ಎಂದು ಪೊಲೀಸ್ ವರಿಷ್ಠಾಧಿಕಾರಿ ಅರವಿಂದ್ ಚತುರ್ವೇದಿ ತಿಳಿಸಿದರು.</p>.<p>‘ರಾಜೇಂದ್ರ ಕುಮಾರ್ ಶುಕ್ಲಾ ನಕಲಿ ವೈದ್ಯನಾಗಿದ್ದು, ಕೇವಲ 8 ನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡಿದ್ದಾನೆ. ಆಸ್ಪತ್ರೆಯ ಕಾರ್ಯನಿರ್ವಾಹಕ ರಾಜೇಶ್ ಕುಮಾರ್ ಸಾಹ್ನಿ 12 ಕ್ಲಾಸ್ ಪಾಸ್ ಆಗಿದ್ದಾನೆ. ಈ ಸಂಬಂಧ ಸಂತ್ರಸ್ತೆಯ ಪತಿ ನೀಡಿರುವ ದೂರಿನನ್ವಯ ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದೇವೆ’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಲ್ತಾನ್ಪುರ: </strong>ನಕಲಿ ವೈದ್ಯರೊಬ್ಬರು ಶಸ್ತ್ರಚಿಕಿತ್ಸೆ ನೆರವೇರಿಸುತ್ತಿದ್ದ ವೇಳೆ ಮಹಿಳೆ ಮತ್ತು ಆಕೆಯ ನವಜಾತ ಶಿಶು ಮೃತಪಟ್ಟ ಘಟನೆ ಉತ್ತರಪ್ರದೇಶದ ಆಸ್ಪತ್ರೆಯೊಂದರಲ್ಲಿ ನಡೆದಿದೆ.</p>.<p>‘ಈ ಪ್ರಕರಣ ಸಂಬಂಧ ನಕಲಿ ವೈದ್ಯ ಮತ್ತು ಆಸ್ಪತ್ರೆಯ ಕಾರ್ಯನಿರ್ವಾಹಕನನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಪೂನಂ (35) ಎಂಬ ಮಹಿಳೆಗೆ ಗುರುವಾರ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ದೀಹ ಗ್ರಾಮದಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು.ರಾಜೇಂದ್ರ ಕುಮಾರ್ ಶುಕ್ಲಾ ಎಂಬುವವರು ಶಸ್ತ್ರಚಿಕಿತ್ಸೆ ನೆರವೇರಿಸುತ್ತಿದ್ದ ಸಮಯದಲ್ಲಿ ಮಗು ಮತ್ತು ತಾಯಿ ಮೃತಪಟ್ಟಿದ್ದಾರೆ’ ಎಂದು ಪೊಲೀಸ್ ವರಿಷ್ಠಾಧಿಕಾರಿ ಅರವಿಂದ್ ಚತುರ್ವೇದಿ ತಿಳಿಸಿದರು.</p>.<p>‘ರಾಜೇಂದ್ರ ಕುಮಾರ್ ಶುಕ್ಲಾ ನಕಲಿ ವೈದ್ಯನಾಗಿದ್ದು, ಕೇವಲ 8 ನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡಿದ್ದಾನೆ. ಆಸ್ಪತ್ರೆಯ ಕಾರ್ಯನಿರ್ವಾಹಕ ರಾಜೇಶ್ ಕುಮಾರ್ ಸಾಹ್ನಿ 12 ಕ್ಲಾಸ್ ಪಾಸ್ ಆಗಿದ್ದಾನೆ. ಈ ಸಂಬಂಧ ಸಂತ್ರಸ್ತೆಯ ಪತಿ ನೀಡಿರುವ ದೂರಿನನ್ವಯ ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದೇವೆ’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>