ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ: ಲೇಡಿ ಸಿಂಗಂ ಖ್ಯಾತಿಯ ಆರ್‌ಎಫ್‌ಒ ದೀಪಾಲಿ ಚವ್ಹಾಣ ಆತ್ಮಹತ್ಯೆ

Last Updated 27 ಮಾರ್ಚ್ 2021, 11:18 IST
ಅಕ್ಷರ ಗಾತ್ರ

ಅಮರಾವತಿ: ಮಹಾರಾಷ್ಟ್ರದ ಲೇಡಿ ಸಿಂಗಂ ಖ್ಯಾತಿಯ ಮೆಲ್ಗಾಟ್‌ ಹುಲಿ ಸಂರಕ್ಷಿತ ಅರಣ್ಯ ವ್ಯಾಪ್ತಿಯಯಲ್ಲಿ ವಲಯ ಅರಣ್ಯ ಸಂರಕ್ಷಣಾಧಿಕಾರಿಯಾಗಿದ್ದ ದೀಪಾಲಿ ಚವ್ಹಾಣ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಮರಾವತಿ ಜಿಲ್ಲೆಯ ಹರಿಸಾಲ್‌ದಲ್ಲಿರುವ ತಮ್ಮ ನಿವಾಸದಲ್ಲಿ ಸರ್ವೀಸ್ ರಿವಾಲ್ವಾರ್‌ನಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮೆಲ್ಘಾಟ್‌ ಹುಲಿ ಸಂರಕ್ಷಿತ ಪ್ರದೇಶದಲ್ಲಿರುವ ಗೊಗಮಾಲ್‌ ಅರಣ್ಯ ವಲಯದ ಅರಿಸಾಲ್‌ನಲ್ಲಿ ವಲಯ ಸಂರಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅವರು ಏತಕ್ಕಾಗಿ ಇಂಥ ನಿರ್ಧಾರ ತೆಗೆದುಕೊಂಡಿದೆ ಎಂದು ತಿಳಿಯುತ್ತಿಲ್ಲ. ಈ ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಧರಣಿ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT