ಅಜಯ್ ಎಂಬುವವರ ಮೇಲೆ ಒತ್ತುವರಿ ಕುರಿತು ಹಲವು ದೂರುಗಳು ಬಂದ ಹಿನ್ನೆಲೆಯಲ್ಲಿ ಇಲಾಖೆಯ ತಂಡ ಗುರುವಾರ ಗ್ರಾಮಕ್ಕೆ ತೆರಳಿ, ಒತ್ತುವರಿ ತೆರವುಗೊಳಿಸುವಂತೆ ಸೂಚನೆ ನೀಡಿ ಹಿಂದಿರುಗಿದ್ದರು. ನಂತರ ಮಹಿಳೆ ಗುಡಿಸಲಿಗೆ ಬೆಂಕಿ ಹಚ್ಚಿದ್ದು, ಸ್ಥಳೀಯರು ಅವಘಡ ತಪ್ಪಿಸಿದ್ದಾರೆ. ಇವೆಲ್ಲವೂ ಗ್ರಾಮದ ಮುಖ್ಯಸ್ಥರು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ನಡೆದಿದೆ ಎಂದು ಕಂದಾಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.