<p><strong>ಮುಂಬೈ: </strong>ಸಚಿವ ಧನಂಜಯ್ ಮುಂಡೆ ಅವರ ಮೇಲೆ ಅತ್ಯಾಚಾರ ಆರೋಪ ಹೊರಿಸಿ, ಪೊಲೀಸರಿಗೆ ದೂರು ನೀಡಿದ್ದ ಮುಂಬೈ ಮೂಲದ ಮಹಿಳೆ, ತಾನು ನೀಡಿದ್ದ ದೂರನ್ನು ಹಿಂಪಡೆದಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.</p>.<p>‘ಮುಂಡೆ ವಿರುದ್ಧ ನೀಡಿದ್ದ ದೂರನ್ನು ಹಿಂದಕ್ಕೆ ತೆಗೆದುಕೊಳ್ಳುತ್ತಿದ್ದೇನೆ‘ ಎಂದು ಮಹಿಳೆ, ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾ ಅಧಿಕಾರಿಗೆ ತಿಳಿಸಿದ್ದಾರೆ. ಆದರೆ ದೂರು ಹಿಂಪಡೆದಿರುವುದಕ್ಕೆ ಯಾವುದೇ ಕಾರಣವನ್ನು ಉಲ್ಲೇಖಿಸಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ದೂರು ಹಿಂಪಡೆದಿರುವ ಸಂಬಂಧ ನೋಟರಿ ದೃಢೀಕೃತ ಪ್ರಮಾಣ ಪತ್ರ ಸಲ್ಲಿಸುವಂತೆ ಪೊಲೀಸರು ದೂರುದಾರರಿಗೆ ಸೂಚಿಸಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/15-year-old-girl-found-dead-in-uttar-pradesh-chitrakoot-rape-suspected-798554.html" itemprop="url">ತಂದೆಗೆ ಊಟ ಕೊಡಲು ತೆರಳಿದ್ದ ಬಾಲಕಿಗೆ ಕೊಡಲಿಯಿಂದ ಹೊಡೆದು ಕೊಲೆ; ಅತ್ಯಾಚಾರದ ಶಂಕೆ </a></p>.<p>2006 ರಲ್ಲಿ ಮದುವೆಯ ನೆಪದಲ್ಲಿ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮುಂಬೈ ಮೂಲದ ಮಹಿಳೆಯೊಬ್ಬರು ಸಾಮಾಜಿಕ ನ್ಯಾಯ ಸಚಿವ ಧನಂಜಯ್ ಮುಂಡೆ ವಿರುದ್ಧ ಜನವರಿ 11 ರಂದು ದೂರು ನೀಡಿದ್ದರು. ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾಗ, ದೂರದಾರ ಮಹಿಳೆ, ತನ್ನ ಹೇಳಿಕೆಯನ್ನು ದಾಖಲಿಸಲು ಓಶಿಪುರ ಪೊಲೀಸ್ ಠಾಣೆಗೆ ತೆರೆಳಿದ್ದರು.</p>.<p>ಬೀಢ್ ಜಿಲ್ಲೆ ಎನ್ಸಿಪಿ ಪಕ್ಷದ ಹಿರಿಯ ನಾಯಕ ಮುಂಡೆ, ಮಹಿಳೆ ಮಾಡಿರುವ ಆರೋಪವನ್ನು ಅಲ್ಲಗಳೆದಿದ್ದರು. ಆಕೆ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಇದೇ ವೇಳೆ ದೂರು ನೀಡಿರುವ ಮಹಿಳೆಯ ಸಹೋದರಿಯೊಂದಿಗೆ ಸಂಬಂಧ ಹೊಂದಿರುವುದನ್ನು ಸಚಿವರು ಒಪ್ಪಿಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ಸಚಿವ ಧನಂಜಯ್ ಮುಂಡೆ ಅವರ ಮೇಲೆ ಅತ್ಯಾಚಾರ ಆರೋಪ ಹೊರಿಸಿ, ಪೊಲೀಸರಿಗೆ ದೂರು ನೀಡಿದ್ದ ಮುಂಬೈ ಮೂಲದ ಮಹಿಳೆ, ತಾನು ನೀಡಿದ್ದ ದೂರನ್ನು ಹಿಂಪಡೆದಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.</p>.<p>‘ಮುಂಡೆ ವಿರುದ್ಧ ನೀಡಿದ್ದ ದೂರನ್ನು ಹಿಂದಕ್ಕೆ ತೆಗೆದುಕೊಳ್ಳುತ್ತಿದ್ದೇನೆ‘ ಎಂದು ಮಹಿಳೆ, ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾ ಅಧಿಕಾರಿಗೆ ತಿಳಿಸಿದ್ದಾರೆ. ಆದರೆ ದೂರು ಹಿಂಪಡೆದಿರುವುದಕ್ಕೆ ಯಾವುದೇ ಕಾರಣವನ್ನು ಉಲ್ಲೇಖಿಸಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ದೂರು ಹಿಂಪಡೆದಿರುವ ಸಂಬಂಧ ನೋಟರಿ ದೃಢೀಕೃತ ಪ್ರಮಾಣ ಪತ್ರ ಸಲ್ಲಿಸುವಂತೆ ಪೊಲೀಸರು ದೂರುದಾರರಿಗೆ ಸೂಚಿಸಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/15-year-old-girl-found-dead-in-uttar-pradesh-chitrakoot-rape-suspected-798554.html" itemprop="url">ತಂದೆಗೆ ಊಟ ಕೊಡಲು ತೆರಳಿದ್ದ ಬಾಲಕಿಗೆ ಕೊಡಲಿಯಿಂದ ಹೊಡೆದು ಕೊಲೆ; ಅತ್ಯಾಚಾರದ ಶಂಕೆ </a></p>.<p>2006 ರಲ್ಲಿ ಮದುವೆಯ ನೆಪದಲ್ಲಿ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮುಂಬೈ ಮೂಲದ ಮಹಿಳೆಯೊಬ್ಬರು ಸಾಮಾಜಿಕ ನ್ಯಾಯ ಸಚಿವ ಧನಂಜಯ್ ಮುಂಡೆ ವಿರುದ್ಧ ಜನವರಿ 11 ರಂದು ದೂರು ನೀಡಿದ್ದರು. ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾಗ, ದೂರದಾರ ಮಹಿಳೆ, ತನ್ನ ಹೇಳಿಕೆಯನ್ನು ದಾಖಲಿಸಲು ಓಶಿಪುರ ಪೊಲೀಸ್ ಠಾಣೆಗೆ ತೆರೆಳಿದ್ದರು.</p>.<p>ಬೀಢ್ ಜಿಲ್ಲೆ ಎನ್ಸಿಪಿ ಪಕ್ಷದ ಹಿರಿಯ ನಾಯಕ ಮುಂಡೆ, ಮಹಿಳೆ ಮಾಡಿರುವ ಆರೋಪವನ್ನು ಅಲ್ಲಗಳೆದಿದ್ದರು. ಆಕೆ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಇದೇ ವೇಳೆ ದೂರು ನೀಡಿರುವ ಮಹಿಳೆಯ ಸಹೋದರಿಯೊಂದಿಗೆ ಸಂಬಂಧ ಹೊಂದಿರುವುದನ್ನು ಸಚಿವರು ಒಪ್ಪಿಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>