2006 ರಲ್ಲಿ ಮದುವೆಯ ನೆಪದಲ್ಲಿ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮುಂಬೈ ಮೂಲದ ಮಹಿಳೆಯೊಬ್ಬರು ಸಾಮಾಜಿಕ ನ್ಯಾಯ ಸಚಿವ ಧನಂಜಯ್ ಮುಂಡೆ ವಿರುದ್ಧ ಜನವರಿ 11 ರಂದು ದೂರು ನೀಡಿದ್ದರು. ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾಗ, ದೂರದಾರ ಮಹಿಳೆ, ತನ್ನ ಹೇಳಿಕೆಯನ್ನು ದಾಖಲಿಸಲು ಓಶಿಪುರ ಪೊಲೀಸ್ ಠಾಣೆಗೆ ತೆರೆಳಿದ್ದರು.