ಶುಕ್ರವಾರ, ಮಾರ್ಚ್ 24, 2023
31 °C
ಸುಪ್ರೀಂಕೋರ್ಟ್‌ಗೆ ಅರ್ಜಿದಾರ ಉಪಾಧ್ಯಾಯ ಮಾಹಿತಿ

ವಿದೇಶಿ ದೇಣಿಗೆಯಿಂದ ನಡೆಯುವ ಮತಾಂತರಕ್ಕೆ ಮಹಿಳೆಯರು, ಮಕ್ಕಳೇ ಗುರಿ: ಅಶ್ವಿನಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ವಿದೇಶಿ ದೇಣಿಗೆ ನೆರವಿನಿಂದ ನಡೆಯುವ ಮತಾಂತರಕ್ಕೆ ಮಹಿಳೆ ಮತ್ತು ಮಕ್ಕಳೇ ಗುರಿ. ಇದನ್ನು ತಡೆಯುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲವಾಗಿವೆ ಎಂದು ಸುಪ್ರೀಂಕೋರ್ಟ್‌ಗೆ ಮಾಹಿತಿ ನೀಡಲಾಗಿದೆ.

ಈ ವಿಷಯವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಿರುವ ಅಶ್ವಿನಿ ಉಪಾಧ್ಯಾಯ ಅವರು, ನ್ಯಾಯಮೂರ್ತಿಗಳಾದ ಎಂ.ಆರ್‌.ಶಾ ಹಾಗೂ ಸಿ.ಟಿ.ರವಿಕುಮಾರ್ ಅವರಿದ್ದ ನ್ಯಾಯಪೀಠಕ್ಕೆ ಲಿಖಿತವಾಗಿ ಮಾಹಿತಿ ಸಲ್ಲಿಸಿದ್ದಾರೆ.

‘ಧಾರ್ಮಿಕ ಮತಾಂತರ ತಡೆಯುವುದಕ್ಕೆ ಸಂಬಂಧಿಸಿ ಸರಿಯಾದ ಕಾನೂನುಗಳೇ ಇಲ್ಲ. ಈ ನ್ಯೂನತೆಯನ್ನೇ ದುರುಪಯೋಗಪಡಿಸಿಕೊಂಡು, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದವರನ್ನು ಮತಾಂತರ ಮಾಡಲಾಗುತ್ತಿದೆ’ ಎಂದು ಅರ್ಜಿದಾರರು ತಿಳಿಸಿದ್ದಾರೆ.

ಕೆಲ ಎನ್‌ಜಿಒಗಳು ಮತಾಂತರ ನಡೆಸುತ್ತಿವೆ. ವಿದೇಶಗಳಿಂದ ದೇಣಿಗೆ ಸ್ವೀಕರಿಸುವ ಈ ಎನ್‌ಜಿಒಗಳಿಗೆ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಯಡಿ (ಎಫ್‌ಸಿಆರ್‌ಎ) ಹಲವು ವಿನಾಯಿತಿಗಳನ್ನು ನೀಡಲಾಗಿದೆ. ಈ ಕುರಿತು ಕೂಡ ಮರುಪರಿಶೀಲನೆ ನಡೆಸಬೇಕು ಎಂದು ಕೋರಿದ್ದಾರೆ.

ಡಿ. 12ರಂದು ಸುಪ್ರೀಂಕೋರ್ಟ್‌ ಈ ಪಿಐಎಲ್‌ಗೆ ಸಂಬಂಧಿಸಿದ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು