<p><strong>ಲಖನೌ:</strong> ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಮಸೀದಿ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನೀಡಿರುವ ಹೇಳಿಕೆಗೆ ಸಮಾಜವಾದಿ ಪಕ್ಷ ಆಕ್ಷೇಪ ವ್ಯಕ್ತಪಡಿಸಿದೆ.</p>.<p>ಯೋಗಿ ಆದಿತ್ಯನಾಥ ಅವರು ಕ್ಷಮೆಯಾಚಿಸಬೇಕು ಎಂದು ಅದು ಒತ್ತಾಯಿಸಿದೆ.</p>.<p>‘ಯೋಗಿ ಆದಿತ್ಯನಾಥ ಅವರು ಇಡೀ ರಾಜ್ಯಕ್ಕೆ ಮುಖ್ಯಮಂತ್ರಿಯಾಗಿದ್ದಾರೆಯೇ ಹೊರತು ಕೇವಲ ಹಿಂದೂ ಸಮುದಾಯಕ್ಕೆ ಮಾತ್ರವಲ್ಲ. ಮುಖ್ಯಮಂತ್ರಿ ಅವರ ಈ ಹೇಳಿಕೆ ಹುದ್ದೆಯ ಘನತೆಗೆ ಧಕ್ಕೆ ತರುತ್ತದೆ’ ಎಂದು ಸಮಾಜವಾದಿ ಪಕ್ಷದ ವಕ್ತಾರ ಪವನ್ ಪಾಂಡೆ ಶುಕ್ರವಾರ ಟೀಕಿಸಿದ್ದಾರೆ.</p>.<p>‘ಒಬ್ಬ ಯೋಗಿಯಾಗಿ ಮತ್ತು ಹಿಂದೂವಾಗಿ ಮಸೀದಿ ಉದ್ಘಾಟನೆಗೆ ತೆರಳುವುದಿಲ್ಲ’ ಎಂದು ಯೋಗಿ ಆದಿತ್ಯನಾಥ ಅವರು ಗುರುವಾರ ಟಿ.ವಿ. ಸಂದರ್ಶನವೊಂದರಲ್ಲಿ ಹೇಳಿದ್ದರು.</p>.<p>‘ಒಬ್ಬ ಮುಖ್ಯಮಂತ್ರಿಯಾಗಿ ಯಾವುದೇ ಧರ್ಮ ಅಥವಾ ಸಮುದಾಯದ ನಂಬಿಕೆಯ ಬಗ್ಗೆ ನನಗೆ ಸಮಸ್ಯೆ ಇಲ್ಲ. ಆದರೆ, ಒಬ್ಬ ಯೋಗಿಯಾಗಿ ನೀವು ನನ್ನನ್ನು ಪ್ರಶ್ನಿಸಿದರೆ, ಖಚಿತವಾಗಿ ನಾನು ಹೋಗುವುದಿಲ್ಲ. ಒಬ್ಬ ಹಿಂದೂವಾಗಿ ನನ್ನ ಉಪಾಸನಾ ವಿಧಿಯನ್ನು ವ್ಯಕ್ತಪಡಿಸುವ ಹಕ್ಕು ನನಗಿದೆ. ಈ ಹಿನ್ನೆಲೆಯಲ್ಲೇ ನಾನು ನಡೆದುಕೊಳ್ಳುತ್ತೇನೆ’ ಎಂದು ಯೋಗಿ ಆದಿತ್ಯನಾಥ ಹೇಳಿದ್ದರು.</p>.<p>‘ನಾನು ವಾದಿಯೂ ಅಲ್ಲ, ಪ್ರತಿವಾದಿಯೂ ಅಲ್ಲ. ಹೀಗಾಗಿ, ನನ್ನನ್ನು ಆಹ್ವಾನಿಸುವುದಿಲ್ಲ. ನಾನು ಹೋಗುವುದಿಲ್ಲ. ಜತೆಗೆ, ಅಂತಹ ಆಹ್ವಾನವೂ ನನಗೆ ಬರುವುದಿಲ್ಲ ಎನ್ನುವುದು ನನಗೆ ಗೊತ್ತಿದೆ’ ಎಂದು ಹೇಳಿದ್ದರು.</p>.<p>‘ನನ್ನನ್ನು ಅವರು ಆಹ್ವಾನಿಸಿದ ದಿನ ಹಲವರ ಜಾತ್ಯತೀತತೆ ಅಪಾಯದಲ್ಲಿ ಸಿಲುಕುತ್ತದೆ. ಅವರ ಜಾತ್ಯತೀತತೆ ಅಪಾಯದಲ್ಲಿ ಸಿಲುಕುವುದು ಬೇಡ. ಮೌನವಾಗಿ ನನ್ನ ಕರ್ತವ್ಯವನ್ನು ನಿರ್ವಹಿಸುತ್ತೇನೆ. ಯಾವುದೇ ರೀತಿಯ ತಾರತಮ್ಯವಿಲ್ಲದೆ ಸರ್ಕಾರದ ಸೌಲಭ್ಯಗಳು ಪ್ರತಿಯೊಬ್ಬರಿಗೆ ತಲುಪುವಂತೆ ನೋಡಿಕೊಳ್ಳುತ್ತೇನೆ’ ಎಂದು ಸಂದರ್ಶನದಲ್ಲಿ ಹೇಳಿದ್ದರು.</p>.<p>ಈ ಬಗ್ಗೆ ಪ್ರತಿಕ್ರಿಯಿಸಲು ಉತ್ತರ ಪ್ರದೇಶದ ಕಾಂಗ್ರೆಸ್ ವಕ್ತಾರರು ನಿರಾಕರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಮಸೀದಿ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನೀಡಿರುವ ಹೇಳಿಕೆಗೆ ಸಮಾಜವಾದಿ ಪಕ್ಷ ಆಕ್ಷೇಪ ವ್ಯಕ್ತಪಡಿಸಿದೆ.</p>.<p>ಯೋಗಿ ಆದಿತ್ಯನಾಥ ಅವರು ಕ್ಷಮೆಯಾಚಿಸಬೇಕು ಎಂದು ಅದು ಒತ್ತಾಯಿಸಿದೆ.</p>.<p>‘ಯೋಗಿ ಆದಿತ್ಯನಾಥ ಅವರು ಇಡೀ ರಾಜ್ಯಕ್ಕೆ ಮುಖ್ಯಮಂತ್ರಿಯಾಗಿದ್ದಾರೆಯೇ ಹೊರತು ಕೇವಲ ಹಿಂದೂ ಸಮುದಾಯಕ್ಕೆ ಮಾತ್ರವಲ್ಲ. ಮುಖ್ಯಮಂತ್ರಿ ಅವರ ಈ ಹೇಳಿಕೆ ಹುದ್ದೆಯ ಘನತೆಗೆ ಧಕ್ಕೆ ತರುತ್ತದೆ’ ಎಂದು ಸಮಾಜವಾದಿ ಪಕ್ಷದ ವಕ್ತಾರ ಪವನ್ ಪಾಂಡೆ ಶುಕ್ರವಾರ ಟೀಕಿಸಿದ್ದಾರೆ.</p>.<p>‘ಒಬ್ಬ ಯೋಗಿಯಾಗಿ ಮತ್ತು ಹಿಂದೂವಾಗಿ ಮಸೀದಿ ಉದ್ಘಾಟನೆಗೆ ತೆರಳುವುದಿಲ್ಲ’ ಎಂದು ಯೋಗಿ ಆದಿತ್ಯನಾಥ ಅವರು ಗುರುವಾರ ಟಿ.ವಿ. ಸಂದರ್ಶನವೊಂದರಲ್ಲಿ ಹೇಳಿದ್ದರು.</p>.<p>‘ಒಬ್ಬ ಮುಖ್ಯಮಂತ್ರಿಯಾಗಿ ಯಾವುದೇ ಧರ್ಮ ಅಥವಾ ಸಮುದಾಯದ ನಂಬಿಕೆಯ ಬಗ್ಗೆ ನನಗೆ ಸಮಸ್ಯೆ ಇಲ್ಲ. ಆದರೆ, ಒಬ್ಬ ಯೋಗಿಯಾಗಿ ನೀವು ನನ್ನನ್ನು ಪ್ರಶ್ನಿಸಿದರೆ, ಖಚಿತವಾಗಿ ನಾನು ಹೋಗುವುದಿಲ್ಲ. ಒಬ್ಬ ಹಿಂದೂವಾಗಿ ನನ್ನ ಉಪಾಸನಾ ವಿಧಿಯನ್ನು ವ್ಯಕ್ತಪಡಿಸುವ ಹಕ್ಕು ನನಗಿದೆ. ಈ ಹಿನ್ನೆಲೆಯಲ್ಲೇ ನಾನು ನಡೆದುಕೊಳ್ಳುತ್ತೇನೆ’ ಎಂದು ಯೋಗಿ ಆದಿತ್ಯನಾಥ ಹೇಳಿದ್ದರು.</p>.<p>‘ನಾನು ವಾದಿಯೂ ಅಲ್ಲ, ಪ್ರತಿವಾದಿಯೂ ಅಲ್ಲ. ಹೀಗಾಗಿ, ನನ್ನನ್ನು ಆಹ್ವಾನಿಸುವುದಿಲ್ಲ. ನಾನು ಹೋಗುವುದಿಲ್ಲ. ಜತೆಗೆ, ಅಂತಹ ಆಹ್ವಾನವೂ ನನಗೆ ಬರುವುದಿಲ್ಲ ಎನ್ನುವುದು ನನಗೆ ಗೊತ್ತಿದೆ’ ಎಂದು ಹೇಳಿದ್ದರು.</p>.<p>‘ನನ್ನನ್ನು ಅವರು ಆಹ್ವಾನಿಸಿದ ದಿನ ಹಲವರ ಜಾತ್ಯತೀತತೆ ಅಪಾಯದಲ್ಲಿ ಸಿಲುಕುತ್ತದೆ. ಅವರ ಜಾತ್ಯತೀತತೆ ಅಪಾಯದಲ್ಲಿ ಸಿಲುಕುವುದು ಬೇಡ. ಮೌನವಾಗಿ ನನ್ನ ಕರ್ತವ್ಯವನ್ನು ನಿರ್ವಹಿಸುತ್ತೇನೆ. ಯಾವುದೇ ರೀತಿಯ ತಾರತಮ್ಯವಿಲ್ಲದೆ ಸರ್ಕಾರದ ಸೌಲಭ್ಯಗಳು ಪ್ರತಿಯೊಬ್ಬರಿಗೆ ತಲುಪುವಂತೆ ನೋಡಿಕೊಳ್ಳುತ್ತೇನೆ’ ಎಂದು ಸಂದರ್ಶನದಲ್ಲಿ ಹೇಳಿದ್ದರು.</p>.<p>ಈ ಬಗ್ಗೆ ಪ್ರತಿಕ್ರಿಯಿಸಲು ಉತ್ತರ ಪ್ರದೇಶದ ಕಾಂಗ್ರೆಸ್ ವಕ್ತಾರರು ನಿರಾಕರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>