ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಂಧ್ರಪ್ರದೇಶ | ಚಂದ್ರಬಾಬು ನಾಯ್ಡು ವಿರುದ್ಧ ಸ್ಪರ್ಧಿಸಲ್ಲ: ನಟ ವಿಶಾಲ್ ಸ್ಪಷ್ಟನೆ

Last Updated 21 ಡಿಸೆಂಬರ್ 2022, 4:09 IST
ಅಕ್ಷರ ಗಾತ್ರ

ಅಮರಾವತಿ: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ, ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ವಿರುದ್ಧ ಚುನಾವಣೆಗೆ ಸ್ಪರ್ಧಿಸಲ್ಲ ಎಂದು ನಟ ವಿಶಾಲ್ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜನರ ಸೇವೆ ಮಾಡಲು ರಾಜಕೀಯಕ್ಕೆ ಬರುವ ಅಗತ್ಯವಿಲ್ಲ. ಸಾರ್ವಜನಿಕರ ಸೇವೆ ಮಾಡುವವರೆಲ್ಲ ರಾಜಕಾರಣಿಗಳೇ’ ಎಂದಿದ್ದಾರೆ.

ಆಂಧ್ರಪ್ರದೇಶದ ಕುಪ್ಪಂ ವಿಧಾನಸಭಾ ಕ್ಷೇತ್ರದಲ್ಲಿ ಚಂದ್ರಬಾಬು ನಾಯ್ಡು ವಿರುದ್ಧ ವಿಶಾಲ್ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು.

ಚಂದ್ರಬಾಬು ನಾಯ್ಡು ಅವರಿಗಿಂತಲೂ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರನ್ನು ನಾನು ಹೆಚ್ಚು ಇಷ್ಟಪಡುತ್ತೇನೆ ಎಂದು ವಿಶಾಲ್ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT