<p class="title"><strong>ನವದೆಹ</strong>ಲಿ: ಮುಕ್ತ ಚರ್ಚೆ ಅಗತ್ಯ ಎಂದು ಪ್ರತಿಪಾದಿಸಿರುವ ಸುಪ್ರೀಂ ಕೋರ್ಟ್, ಪ್ರಶ್ನಿಸುವ ಕುರಿತಂತೆ ಹೈಕೋರ್ಟ್ಗಳ ನೈತಿಕಸ್ಥೈರ್ಯ ಕುಗ್ಗಿಸುವುದಿಲ್ಲ ಅಥವಾ ಪಿಐಎಲ್ಗಳ ವಿಚಾರಣೆ ವೇಳೆ ವ್ಯಕ್ತವಾಗುವ ಮೌಖಿಕ ಅಭಿಪ್ರಾಯಗಳನ್ನು ವರದಿ ಮಾಡದಂತೆ ಮಾಧ್ಯಮಗಳನ್ನು ತಡೆಯುವುದಿಲ್ಲ ಎಂದು ಸೋಮವಾರ ಹೇಳಿದೆ.</p>.<p class="title">ಹೈಕೋರ್ಟ್ಗಳು ಪ್ರಜಾಪ್ರಭುತ್ವದ ಪ್ರಮುಖ ಆಧಾರಸ್ತಂಭಗಳು ಎಂದೂ ಸುಪ್ರೀಂ ಕೋರ್ಟ್ ಹೇಳಿದೆ. ‘ಚುನಾವಣಾ ಆಯೋಗದ ವಿರುದ್ಧ ಮದ್ರಾಸ್ ಹೈಕೋರ್ಟ್ ಅಭಿಪ್ರಾಯಗಳು ಅನಪೇಕ್ಷಿತ. ತಾನು ಎರಡು ಸಂವಿಧಾನಿಕ ಸಂಸ್ಥೆಗಳ ನಡುವೆ ಸಮತೋಲನ ಕಾಯ್ದುಕೊಳ್ಳಲಿದೆ’ ಎಂಬ ಆಯೋಗದ ಹೇಳಿಕೆಯನ್ನು ಕೋರ್ಟ್ ಪರಿಗಣಿಸಲಿದೆ ಎಂದು ಹೇಳಿತು.</p>.<p>ದೇಶದಲ್ಲಿ ಕೋವಿಡ್ ಪ್ರಕರಣಗಳ ತೀವ್ರ ಏರಿಕೆಗೆ ಚುನಾವಣೆಯನ್ನು ನಡೆಸಿದ ಆಯೋಗದ ತೀರ್ಮಾನವೇ ಕಾರಣ ಎಂಬ ಮದ್ರಾಸ್ ಹೈಕೋರ್ಟ್ನ ಕಟು ಹೇಳಿಕೆಯ ವಿರುದ್ಧ ಚುನಾವಣಾ ಆಯೋಗವು ಸಲ್ಲಿಸಿದ್ದ ಮನವಿ ಕುರಿತಂತೆ ತನ್ನ ಆದೇಶವನ್ನು ನ್ಯಾಯಮೂರ್ತಿಗಳಾದ ಡಿ.ವೈಚಂದ್ರಚೂಡ ಮತ್ತು ಎಂ.ಆರ್.ಶಾ ಅವರಿದ್ದ ಪೀಠವು ಕಾಯ್ದಿರಿಸಿತು.</p>.<p>ಹೈಕೋರ್ಟ್ನ ಅಭಿಪ್ರಾಯದ ಉದ್ದೇಶ ಸಾಂವಿಧಾನದ ಪೀಠದ ಸ್ಥೈರ್ಯವನ್ನು ಕುಗ್ಗಿಸುವುದು ಆಗಿರಲಿಲ್ಲ. ವಿಚಾರಣೆಯ ವೇಳೆ ಆಗಿನ ಸಂದರ್ಭದಲ್ಲಿ ಬಂದಿರಬಹುದಾದ ಮಾತುಗಳವು. ಹೀಗಾಗಿ, ಅದು ನ್ಯಾಯಾಂಗದ ಆದೇಶವಲ್ಲ ಎಂದು ಸುಪ್ರೀಂ ಕೋರ್ಟ್ ಇದೇ ಸಂದರ್ಭದಲ್ಲಿ ಚುನಾವಣಾ ಆಯೋಗಕ್ಕೆ ತಿಳಿಸಿತು.</p>.<p>ಚುನಾವಣಾ ಆಯೋಗ ಸಾಂವಿಧಾನಿಕವಾದ ಸಂಸ್ಥೆ. ಅದಕ್ಕೆ ದೇಶದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ಹೊಣೆಗಾರಿಕೆ ಇದೆ. ವ್ಯಕ್ತವಾದ ಅಭಿಪ್ರಾಯಗಳಿಂದ ಅದು ವಿಚಲಿತವಾಗಬಾರದು ಎಂದು ಹೇಳಿತು.</p>.<p>ಪ್ರಸ್ತುತ ಕಾಲದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯ ವೇಳೆಗೆ ವ್ಯಕ್ತವಾಗುವ ಅಭಿಪ್ರಾಯಗಳನ್ನು ವರದಿ ಮಾಡದಂತೆ ಮಾಧ್ಯಮಗಳನ್ನು ತಡೆಯಲಾಗದು. ಕೋರ್ಟ್ನಲ್ಲಿ ಬರುವ ಅಭಿಪ್ರಾಯಗಳು ಆದೇಶದಷ್ಟೇ ಮುಖ್ಯವಾದುದು.ಅಲ್ಲಿನ ಪ್ರಕ್ರಿಯೆಗಳು ಸಾರ್ವಜನಿಕ ಹಿತಾಸಕ್ತಿಯಿಂದಲೇ ಆಗುತ್ತವೆ ಎಂದು ಅಭಿಪ್ರಾಯಪಟ್ಟಿತು.</p>.<p>ಅಲ್ಲದೆ, ವಿಚಾರಣೆ ಸಂದರ್ಭದಲ್ಲಿ ನ್ಯಾಯಮೂರ್ತಿಗಳು ಅಭಿಪ್ರಾಯಗಳನ್ನು ಪಡೆಯಲು ವಕೀಲರಿಗೆ ಪ್ರಶ್ನೆ ಕೇಳುತ್ತಾರೆ. ಅದರರ್ಥ ಅವರು ವ್ಯಕ್ತಿ, ಸಂಸ್ಥೆಯ ವಿರುದ್ಧ ಎಂದರ್ಥವಲ್ಲ ಎಂದೂ ಹೇಳಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹ</strong>ಲಿ: ಮುಕ್ತ ಚರ್ಚೆ ಅಗತ್ಯ ಎಂದು ಪ್ರತಿಪಾದಿಸಿರುವ ಸುಪ್ರೀಂ ಕೋರ್ಟ್, ಪ್ರಶ್ನಿಸುವ ಕುರಿತಂತೆ ಹೈಕೋರ್ಟ್ಗಳ ನೈತಿಕಸ್ಥೈರ್ಯ ಕುಗ್ಗಿಸುವುದಿಲ್ಲ ಅಥವಾ ಪಿಐಎಲ್ಗಳ ವಿಚಾರಣೆ ವೇಳೆ ವ್ಯಕ್ತವಾಗುವ ಮೌಖಿಕ ಅಭಿಪ್ರಾಯಗಳನ್ನು ವರದಿ ಮಾಡದಂತೆ ಮಾಧ್ಯಮಗಳನ್ನು ತಡೆಯುವುದಿಲ್ಲ ಎಂದು ಸೋಮವಾರ ಹೇಳಿದೆ.</p>.<p class="title">ಹೈಕೋರ್ಟ್ಗಳು ಪ್ರಜಾಪ್ರಭುತ್ವದ ಪ್ರಮುಖ ಆಧಾರಸ್ತಂಭಗಳು ಎಂದೂ ಸುಪ್ರೀಂ ಕೋರ್ಟ್ ಹೇಳಿದೆ. ‘ಚುನಾವಣಾ ಆಯೋಗದ ವಿರುದ್ಧ ಮದ್ರಾಸ್ ಹೈಕೋರ್ಟ್ ಅಭಿಪ್ರಾಯಗಳು ಅನಪೇಕ್ಷಿತ. ತಾನು ಎರಡು ಸಂವಿಧಾನಿಕ ಸಂಸ್ಥೆಗಳ ನಡುವೆ ಸಮತೋಲನ ಕಾಯ್ದುಕೊಳ್ಳಲಿದೆ’ ಎಂಬ ಆಯೋಗದ ಹೇಳಿಕೆಯನ್ನು ಕೋರ್ಟ್ ಪರಿಗಣಿಸಲಿದೆ ಎಂದು ಹೇಳಿತು.</p>.<p>ದೇಶದಲ್ಲಿ ಕೋವಿಡ್ ಪ್ರಕರಣಗಳ ತೀವ್ರ ಏರಿಕೆಗೆ ಚುನಾವಣೆಯನ್ನು ನಡೆಸಿದ ಆಯೋಗದ ತೀರ್ಮಾನವೇ ಕಾರಣ ಎಂಬ ಮದ್ರಾಸ್ ಹೈಕೋರ್ಟ್ನ ಕಟು ಹೇಳಿಕೆಯ ವಿರುದ್ಧ ಚುನಾವಣಾ ಆಯೋಗವು ಸಲ್ಲಿಸಿದ್ದ ಮನವಿ ಕುರಿತಂತೆ ತನ್ನ ಆದೇಶವನ್ನು ನ್ಯಾಯಮೂರ್ತಿಗಳಾದ ಡಿ.ವೈಚಂದ್ರಚೂಡ ಮತ್ತು ಎಂ.ಆರ್.ಶಾ ಅವರಿದ್ದ ಪೀಠವು ಕಾಯ್ದಿರಿಸಿತು.</p>.<p>ಹೈಕೋರ್ಟ್ನ ಅಭಿಪ್ರಾಯದ ಉದ್ದೇಶ ಸಾಂವಿಧಾನದ ಪೀಠದ ಸ್ಥೈರ್ಯವನ್ನು ಕುಗ್ಗಿಸುವುದು ಆಗಿರಲಿಲ್ಲ. ವಿಚಾರಣೆಯ ವೇಳೆ ಆಗಿನ ಸಂದರ್ಭದಲ್ಲಿ ಬಂದಿರಬಹುದಾದ ಮಾತುಗಳವು. ಹೀಗಾಗಿ, ಅದು ನ್ಯಾಯಾಂಗದ ಆದೇಶವಲ್ಲ ಎಂದು ಸುಪ್ರೀಂ ಕೋರ್ಟ್ ಇದೇ ಸಂದರ್ಭದಲ್ಲಿ ಚುನಾವಣಾ ಆಯೋಗಕ್ಕೆ ತಿಳಿಸಿತು.</p>.<p>ಚುನಾವಣಾ ಆಯೋಗ ಸಾಂವಿಧಾನಿಕವಾದ ಸಂಸ್ಥೆ. ಅದಕ್ಕೆ ದೇಶದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ಹೊಣೆಗಾರಿಕೆ ಇದೆ. ವ್ಯಕ್ತವಾದ ಅಭಿಪ್ರಾಯಗಳಿಂದ ಅದು ವಿಚಲಿತವಾಗಬಾರದು ಎಂದು ಹೇಳಿತು.</p>.<p>ಪ್ರಸ್ತುತ ಕಾಲದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯ ವೇಳೆಗೆ ವ್ಯಕ್ತವಾಗುವ ಅಭಿಪ್ರಾಯಗಳನ್ನು ವರದಿ ಮಾಡದಂತೆ ಮಾಧ್ಯಮಗಳನ್ನು ತಡೆಯಲಾಗದು. ಕೋರ್ಟ್ನಲ್ಲಿ ಬರುವ ಅಭಿಪ್ರಾಯಗಳು ಆದೇಶದಷ್ಟೇ ಮುಖ್ಯವಾದುದು.ಅಲ್ಲಿನ ಪ್ರಕ್ರಿಯೆಗಳು ಸಾರ್ವಜನಿಕ ಹಿತಾಸಕ್ತಿಯಿಂದಲೇ ಆಗುತ್ತವೆ ಎಂದು ಅಭಿಪ್ರಾಯಪಟ್ಟಿತು.</p>.<p>ಅಲ್ಲದೆ, ವಿಚಾರಣೆ ಸಂದರ್ಭದಲ್ಲಿ ನ್ಯಾಯಮೂರ್ತಿಗಳು ಅಭಿಪ್ರಾಯಗಳನ್ನು ಪಡೆಯಲು ವಕೀಲರಿಗೆ ಪ್ರಶ್ನೆ ಕೇಳುತ್ತಾರೆ. ಅದರರ್ಥ ಅವರು ವ್ಯಕ್ತಿ, ಸಂಸ್ಥೆಯ ವಿರುದ್ಧ ಎಂದರ್ಥವಲ್ಲ ಎಂದೂ ಹೇಳಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>