ಹಿಂಡೆನ್ಬರ್ಗ್ ವರದಿಯ ಹಿಂದೆ ಪಿತೂರಿ ಇದೆ ಎಂದು ಆರೋಪಿಸಿರುವ ವಕೀಲ ಎಂಎಲ್ ಶರ್ಮಾ ಅವರು ಈ ಸಂಬಂಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದಾರೆ. ಇದರ ಜತೆಗೆ ಮಾಧ್ಯಮಗಳಿಗೆ ತಡೆಯಾಜ್ಞೆ ನೀಡಬೇಕೆಂಬ ವಿಷಯವನ್ನು ಅವರು ಮುಖ್ಯ ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ್, ನ್ಯಾ. ಪಿ. ಎಸ್. ನರಸಿಂಹ ಮತ್ತು ಜೆ. ಬಿ. ಪರ್ದಿವಾಲಾ ಅವರ ಪೀಠದ ಮುಂದೆ ಪ್ರಸ್ತಾಪಿಸಿದರು.