<p><strong>ನವದೆಹಲಿ:</strong> ಉತ್ತರ ಪ್ರದೇಶದ ಮಿರ್ಜಾಪುರ ಮತ್ತು ಸೋನ್ಭದ್ರ ಜಿಲ್ಲೆಗಳಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಭಾನುವಾರ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಸ್ವಾತಂತ್ರ್ಯದ ನಂತರ ದಶಕಗಳಿಂದಲೂ ಈ ಪ್ರದೇಶವನ್ನು ನಿರ್ಲಕ್ಷಿಸಲಾಗಿದೆ. ಕಳೆದ ಕೆಲವು ವರ್ಷಗಳಲ್ಲಿ ಈ ಪ್ರದೇಶದ ಪ್ರತಿ ಮನೆಗಳಿಗೆ ನೀರು ಸರಬರಾಜು ಮಾಡಲೆಂದೇ ಈ ಪ್ರದೇಶದಲ್ಲಿ ವೇಗವಾಗಿ ಕೆಲಸ ಮಾಡಲಾಗುತ್ತಿದೆ ಎಂದು ಒತ್ತಿ ಹೇಳಿದ್ದಾರೆ.</p>.<p>ವಿಡಿಯೊ ಕಾನ್ಫರೆನ್ಸ್ ಮೂಲಕ 'ಜಲ ಜೀವನ್ ಮಿಷನ್'ಗೆ ಚಾಲನೆ ನೀಡಿಮಾತನಾಡಿದ ಅವರು, ಸ್ವಾತಂತ್ರ್ಯದ ನಂತರ ದಶಕಗಳಿಂದ ನಿರ್ಲಕ್ಷಿಸಲ್ಪಟ್ಟ ಯಾವುದೇ ಒಂದು ಪ್ರದೇಶವಿದ್ದರೆ, ಅದು ಈ ಪ್ರದೇಶವೇ ಹೆಚ್ಚು ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಹಾಗಾಗಿಯೇ ಜನರು ತಮ್ಮ ಜೀವನೋಪಾಯಕ್ಕಾಗಿ ವಲಸೆ ಹೋಗಬೇಕಾಗಿ ಬಂತು. ಆದರೆ ಮುಂಬರುವ ದಿನಗಳಲ್ಲಿ 3,500 ಹಳ್ಳಿಗಳಿಗೆ ನೀರು ಸರಬರಾಜು ಆದಾಗ, ಇದು 40 ಲಕ್ಷಕ್ಕೂ ಹೆಚ್ಚು ಜನರ ಜೀವನವನ್ನು ಬದಲಾಯಿಸುತ್ತದೆ ಎಂದು ತಿಳಿಸಿದ್ದಾರೆ.</p>.<p>ಈ ಯೋಜನೆಯಡಿ ಲಕ್ಷಾಂತರ ಕುಟುಂಬಗಳಿಗೆ ತಮ್ಮ ಮನೆಗಳಲ್ಲಿ ಕುಡಿಯುವ ನೀರು ಸಿಗಲಿದೆ. ವಿಂಧ್ಯಾಚಲ್ ಅಥವಾ ಬುಂದೇಲ್ಖಂಡ್ಗಳಲ್ಲಿ ಸಾಕಷ್ಟು ಸಂಪನ್ಮೂಲಗಳಿದ್ದರೂ ಕೂಡ ಕೊರತೆಯ ಪ್ರದೇಶಗಳಾಗಿ ಕಂಡಿವೆ. ಇಲ್ಲಿ ಹಲವಾರು ನದಿಗಳ ಹೊರತಾಗಿಯೂ, ಈ ಪ್ರದೇಶಗಳು ಅತ್ಯಂತ ಬರಡು ಮತ್ತು ಬರ ಪೀಡಿತ ಪ್ರದೇಶಗಳೆಂದು ಪ್ರಸಿದ್ಧವಾದವು ಎಂದಿದ್ದಾರೆ.</p>.<p>ಇದು ರಾಜ್ಯ ಮತ್ತು ದೇಶದ ಪ್ರತಿ ಮನೆಗಳಿಗೆ ನೀರು ಸರಬರಾಜು ಮಾಡುವ ಪ್ರಯತ್ನವನ್ನು ಮತ್ತಷ್ಟು ಹೆಚ್ಚಿಸುತ್ತದೆ. ಸದ್ಯದ ಕೋವಿಡ್-19 ಸಾಂಕ್ರಾಮಿಕ ರೋಗದ ನಡುವೆಯೂ ಅಭಿವೃದ್ಧಿ ಕಂಡಿರುವುದಕ್ಕೆ ಉತ್ತರ ಪ್ರದೇಶ ಉದಾಹರಣೆಯಾಗಿದೆ. ಇದು ಉತ್ತರ ಪ್ರದೇಶದ ಸರ್ಕಾರ ಮತ್ತು ಅದರ ಜನರ ಮೇಲಿದ್ದ ಚಿತ್ರಣವನ್ನೇ ಬದಲಾಯಿಸುತ್ತಿದೆ ಎಂದು ಹೇಳಿದರು.</p>.<p>ಕೋವಿಡ್ -19 ಸಾಂಕ್ರಾಮಿಕ ರೋಗವನ್ನು ನಿಭಾಯಿಸುವಲ್ಲಿ ರಾಜ್ಯ ಸರ್ಕಾರದ ಪ್ರಯತ್ನವನ್ನು ಶ್ಲಾಘಿಸಿದ ಪ್ರಧಾನಿ ಮೋದಿ, ಸಾಂಕ್ರಾಮಿಕ ರೋಗದ ಸಮಯದಲ್ಲಿ ಇತರೆಡೆಗಳಿಂದ ಮರಳಿ ಬಂದ ವಲಸಿಗರನ್ನು ಹೇಗೆ ನೋಡಿಕೊಂಡರು ಎಂಬುದು ಸಣ್ಣ ಸಾಧನೆಯಲ್ಲ. 'ಹರ್ ಘರ್ ಜಲ' ಯೋಜನೆಗೆ ಒಂದು ವರ್ಷವಾಗಿದೆ. ಈ ಮೂಲಕ 2.60 ಕೋಟಿ ಕುಟುಂಬಗಳಿಗೆ ತಮ್ಮ ಮನೆಗಳಲ್ಲಿ ಟ್ಯಾಪ್ ಮೂಲಕ ಶುದ್ಧ ಕುಡಿಯುವ ನೀರನ್ನು ಒದಗಿಸಲಾಗಿದೆ. ಇಂದು ಪ್ರಾರಂಭವಾದ ಯೋಜನೆಗಳು ಅದನ್ನು ಇನ್ನಷ್ಟು ವೇಗಗೊಳಿಸುತ್ತವೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಉತ್ತರ ಪ್ರದೇಶದ ಮಿರ್ಜಾಪುರ ಮತ್ತು ಸೋನ್ಭದ್ರ ಜಿಲ್ಲೆಗಳಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಭಾನುವಾರ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಸ್ವಾತಂತ್ರ್ಯದ ನಂತರ ದಶಕಗಳಿಂದಲೂ ಈ ಪ್ರದೇಶವನ್ನು ನಿರ್ಲಕ್ಷಿಸಲಾಗಿದೆ. ಕಳೆದ ಕೆಲವು ವರ್ಷಗಳಲ್ಲಿ ಈ ಪ್ರದೇಶದ ಪ್ರತಿ ಮನೆಗಳಿಗೆ ನೀರು ಸರಬರಾಜು ಮಾಡಲೆಂದೇ ಈ ಪ್ರದೇಶದಲ್ಲಿ ವೇಗವಾಗಿ ಕೆಲಸ ಮಾಡಲಾಗುತ್ತಿದೆ ಎಂದು ಒತ್ತಿ ಹೇಳಿದ್ದಾರೆ.</p>.<p>ವಿಡಿಯೊ ಕಾನ್ಫರೆನ್ಸ್ ಮೂಲಕ 'ಜಲ ಜೀವನ್ ಮಿಷನ್'ಗೆ ಚಾಲನೆ ನೀಡಿಮಾತನಾಡಿದ ಅವರು, ಸ್ವಾತಂತ್ರ್ಯದ ನಂತರ ದಶಕಗಳಿಂದ ನಿರ್ಲಕ್ಷಿಸಲ್ಪಟ್ಟ ಯಾವುದೇ ಒಂದು ಪ್ರದೇಶವಿದ್ದರೆ, ಅದು ಈ ಪ್ರದೇಶವೇ ಹೆಚ್ಚು ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಹಾಗಾಗಿಯೇ ಜನರು ತಮ್ಮ ಜೀವನೋಪಾಯಕ್ಕಾಗಿ ವಲಸೆ ಹೋಗಬೇಕಾಗಿ ಬಂತು. ಆದರೆ ಮುಂಬರುವ ದಿನಗಳಲ್ಲಿ 3,500 ಹಳ್ಳಿಗಳಿಗೆ ನೀರು ಸರಬರಾಜು ಆದಾಗ, ಇದು 40 ಲಕ್ಷಕ್ಕೂ ಹೆಚ್ಚು ಜನರ ಜೀವನವನ್ನು ಬದಲಾಯಿಸುತ್ತದೆ ಎಂದು ತಿಳಿಸಿದ್ದಾರೆ.</p>.<p>ಈ ಯೋಜನೆಯಡಿ ಲಕ್ಷಾಂತರ ಕುಟುಂಬಗಳಿಗೆ ತಮ್ಮ ಮನೆಗಳಲ್ಲಿ ಕುಡಿಯುವ ನೀರು ಸಿಗಲಿದೆ. ವಿಂಧ್ಯಾಚಲ್ ಅಥವಾ ಬುಂದೇಲ್ಖಂಡ್ಗಳಲ್ಲಿ ಸಾಕಷ್ಟು ಸಂಪನ್ಮೂಲಗಳಿದ್ದರೂ ಕೂಡ ಕೊರತೆಯ ಪ್ರದೇಶಗಳಾಗಿ ಕಂಡಿವೆ. ಇಲ್ಲಿ ಹಲವಾರು ನದಿಗಳ ಹೊರತಾಗಿಯೂ, ಈ ಪ್ರದೇಶಗಳು ಅತ್ಯಂತ ಬರಡು ಮತ್ತು ಬರ ಪೀಡಿತ ಪ್ರದೇಶಗಳೆಂದು ಪ್ರಸಿದ್ಧವಾದವು ಎಂದಿದ್ದಾರೆ.</p>.<p>ಇದು ರಾಜ್ಯ ಮತ್ತು ದೇಶದ ಪ್ರತಿ ಮನೆಗಳಿಗೆ ನೀರು ಸರಬರಾಜು ಮಾಡುವ ಪ್ರಯತ್ನವನ್ನು ಮತ್ತಷ್ಟು ಹೆಚ್ಚಿಸುತ್ತದೆ. ಸದ್ಯದ ಕೋವಿಡ್-19 ಸಾಂಕ್ರಾಮಿಕ ರೋಗದ ನಡುವೆಯೂ ಅಭಿವೃದ್ಧಿ ಕಂಡಿರುವುದಕ್ಕೆ ಉತ್ತರ ಪ್ರದೇಶ ಉದಾಹರಣೆಯಾಗಿದೆ. ಇದು ಉತ್ತರ ಪ್ರದೇಶದ ಸರ್ಕಾರ ಮತ್ತು ಅದರ ಜನರ ಮೇಲಿದ್ದ ಚಿತ್ರಣವನ್ನೇ ಬದಲಾಯಿಸುತ್ತಿದೆ ಎಂದು ಹೇಳಿದರು.</p>.<p>ಕೋವಿಡ್ -19 ಸಾಂಕ್ರಾಮಿಕ ರೋಗವನ್ನು ನಿಭಾಯಿಸುವಲ್ಲಿ ರಾಜ್ಯ ಸರ್ಕಾರದ ಪ್ರಯತ್ನವನ್ನು ಶ್ಲಾಘಿಸಿದ ಪ್ರಧಾನಿ ಮೋದಿ, ಸಾಂಕ್ರಾಮಿಕ ರೋಗದ ಸಮಯದಲ್ಲಿ ಇತರೆಡೆಗಳಿಂದ ಮರಳಿ ಬಂದ ವಲಸಿಗರನ್ನು ಹೇಗೆ ನೋಡಿಕೊಂಡರು ಎಂಬುದು ಸಣ್ಣ ಸಾಧನೆಯಲ್ಲ. 'ಹರ್ ಘರ್ ಜಲ' ಯೋಜನೆಗೆ ಒಂದು ವರ್ಷವಾಗಿದೆ. ಈ ಮೂಲಕ 2.60 ಕೋಟಿ ಕುಟುಂಬಗಳಿಗೆ ತಮ್ಮ ಮನೆಗಳಲ್ಲಿ ಟ್ಯಾಪ್ ಮೂಲಕ ಶುದ್ಧ ಕುಡಿಯುವ ನೀರನ್ನು ಒದಗಿಸಲಾಗಿದೆ. ಇಂದು ಪ್ರಾರಂಭವಾದ ಯೋಜನೆಗಳು ಅದನ್ನು ಇನ್ನಷ್ಟು ವೇಗಗೊಳಿಸುತ್ತವೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>