ರಾಷ್ಟ್ರಪತಿಗಳ ಭಾಷಣಕ್ಕೆ ವಂದಿಸುವ ನಿರ್ಣಯದ ಮೇಲಿನ ಚರ್ಚೆ ವೇಳೆ ಮಾತನಾಡಿದ ಅವರು, ‘ಈ ಸಂಕಷ್ಟ ದೈವೇಚ್ಛೆ ಎಂದು ಹಣಕಾಸು ಸಚಿವೆ ಹೇಳಿದರು. ಅದು ಹೇಗೆ ಇದು ದೈವೇಚ್ಛೆಯಾಗುತ್ತದೆ’ ಎಂದು ಪ್ರಶ್ನಿಸಿದ ಅವರು, ‘ಕೋವಿಡ್ ಪಿಡುಗು ದೇಶದಲ್ಲಿ ವ್ಯಾಪಕವಾಗುವ ಮುನ್ನವೇ ದೇಶದ ಆರ್ಥಿಕ ಸ್ಥಿತಿ ಅಧೋಗತಿಗೆ ಇಳಿದಿತ್ತು’ ಎಂದರು.