ಎಐಸಿಸಿ ಮುಖ್ಯ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ಕನ್ಹಯ್ಯ ಕುಮಾರ್, ‘ಯಾತ್ರೆಯು ನಿರೀಕ್ಷೆಯನ್ನೂ ಮೀರಿ ಯಶಸ್ವಿಯಾಗುತ್ತಿದೆ. ಯಾತ್ರೆ ಆರಂಭವಾದಾಗ ಜನರು ಆಗಮಿಸುತ್ತಾರೋ ಇಲ್ಲವೋ, ದಿನಕ್ಕೆ 25 ಕಿ.ಮೀ ಸಾಗಲು ಸಾಧ್ಯವಾಗುತ್ತದೆಯೋ, ಇಲ್ಲವೋ ಎಂಬ ಹಲವು ಪ್ರಶ್ನೆಗಳಿದ್ದವು. ಆದರೆ ಈಗ 60 ದಿನಗಳು ಪೂರ್ಣಗೊಂಡಿವೆ’ ಎಂದು ಹೇಳಿದರು.