ಈ ಪತ್ರವನ್ನು ಉಲ್ಲೇಖಿಸಿ ಬುಧವಾರ ಸಂಜೆ ಟ್ವೀಟ್ ಮಾಡಿರುವ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಬಿಎಸ್ವೈ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
'ಬಿಎಸ್ವೈ ಸರ್ಕಾರದ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್ ಪಕ್ಷವು ಹೇಳುತ್ತಲೇ ಬಂದಿದೆ. ಈಗ ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಚಿವರೇ ಭ್ರಷ್ಟಾಚಾರದ ಬಗ್ಗೆ ಆರೋಪಿಸಿದ್ದಾರೆ' ಎಂದು ಸುರ್ಜೇವಾಲ ಟ್ವೀಟಿಸಿದ್ದಾರೆ.