<p class="title"><strong>ಮುಂಬೈ: </strong>ಯೆಸ್ ಬ್ಯಾಂಕ್ ವಂಚನೆ ಪ್ರಕರಣದ ಸಂಬಂಧ ದಿವಾನ್ ಹೌಸಿಂಗ್ ಫೈನಾನ್ಸ್ ಸಂಸ್ಥೆ ಪ್ರವರ್ತಕರಾದ ಕಪಿಲ್ ಮತ್ತು ಧೀರಜ್ ವಾಧ್ವಾನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ಬಾಂಬೆ ಹೈಕೋರ್ಟ್ ಬುಧವಾರ ತಿರಸ್ಕರಿಸಿತು.</p>.<p>ತನಿಖೆ ನಡೆಸುತ್ತಿರುವ ಸಿಬಿಐ ಸಂಸ್ಥೆಯು ವಿಶೇಷ ನ್ಯಾಯಾಲಯದ ಎದುರು ಆರೋಪಪಟ್ಟಿ ದಾಖಲಿಸುವಾಗ ಸಿಆರ್ಪಿಸಿ ನಿಯಮಗಳನ್ನು ಪಾಲಿಸಿಲ್ಲ ಎಂಬ ಆಧಾರದಲ್ಲಿ ಜಾಮೀನು ಕೋರಿ ವಾಧ್ವಾನ್ ಸಹೋದರರು ಅರ್ಜಿ ಸಲ್ಲಿಸಿದ್ದರು.</p>.<p>ಇವರ ಪರವಾಗಿ ಹಾಜರಿದ್ದ ಹಿರಿಯ ವಕೀಲ ಅಮಿತ್ ದೇಸಾಯಿ ಅವರು, ಸೆಕ್ಷನ್ 173 ಅನ್ವಯ ತನಿಖೆ ಪೂರ್ಣಗೊಂಡ ಸಂದರ್ಭದಲ್ಲಿಯಷ್ಟೇ ಕೋರ್ಟ್ ಆರೋಪಪಟ್ಟಿಯನ್ನು ಗಣನೆಗೆ ತೆಗೆದುಕೊಳ್ಳಬಹುದಾಗಿದೆ. ಈ ಪ್ರಕರಣದಲ್ಲಿ ತನಿಖೆಯು ಇನ್ನು ಪೂರ್ಣಗೊಂಡಿಲ್ಲ. ಹೀಗಾಗಿ, ಅರ್ಜಿದಾರರರು ಜಾಮೀನು ಪಡೆಯಲು ಅರ್ಹರಾಗಿದ್ದಾರೆ ಎಂದು ಪ್ರತಿಪಾದಿಸಿದರು.</p>.<p>ಅಲ್ಲದೆ, ವಿಚಾರಣೆಗಾಗಿ ವಾಧ್ವಾನ್ ಸಹೋದರರನ್ನು ವಶಕ್ಕೆ ಪಡೆಯುವ ಅಗತ್ಯವೂ ಇಲ್ಲ ಎಂದು ವಾದಿಸಿದರು. ಸಿಬಿಐ ಪರವಾಗಿ ಹಾಜರಿದ್ದ ಅನಿಲ್ ಸಿಂಗ್ ಅವರು, ಜಾಮೀನು ನೀಡುವುದಕ್ಕೆ ವಿರೋಧಿಸಿದರು. ಸಿಬಿಐ ಎಲ್ಲ ಅಗತ್ಯ ಮಾನದಂಡಗಳನ್ನು ಪಾಲಿಸಿದೆ ಎಂದು ವಾದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಮುಂಬೈ: </strong>ಯೆಸ್ ಬ್ಯಾಂಕ್ ವಂಚನೆ ಪ್ರಕರಣದ ಸಂಬಂಧ ದಿವಾನ್ ಹೌಸಿಂಗ್ ಫೈನಾನ್ಸ್ ಸಂಸ್ಥೆ ಪ್ರವರ್ತಕರಾದ ಕಪಿಲ್ ಮತ್ತು ಧೀರಜ್ ವಾಧ್ವಾನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ಬಾಂಬೆ ಹೈಕೋರ್ಟ್ ಬುಧವಾರ ತಿರಸ್ಕರಿಸಿತು.</p>.<p>ತನಿಖೆ ನಡೆಸುತ್ತಿರುವ ಸಿಬಿಐ ಸಂಸ್ಥೆಯು ವಿಶೇಷ ನ್ಯಾಯಾಲಯದ ಎದುರು ಆರೋಪಪಟ್ಟಿ ದಾಖಲಿಸುವಾಗ ಸಿಆರ್ಪಿಸಿ ನಿಯಮಗಳನ್ನು ಪಾಲಿಸಿಲ್ಲ ಎಂಬ ಆಧಾರದಲ್ಲಿ ಜಾಮೀನು ಕೋರಿ ವಾಧ್ವಾನ್ ಸಹೋದರರು ಅರ್ಜಿ ಸಲ್ಲಿಸಿದ್ದರು.</p>.<p>ಇವರ ಪರವಾಗಿ ಹಾಜರಿದ್ದ ಹಿರಿಯ ವಕೀಲ ಅಮಿತ್ ದೇಸಾಯಿ ಅವರು, ಸೆಕ್ಷನ್ 173 ಅನ್ವಯ ತನಿಖೆ ಪೂರ್ಣಗೊಂಡ ಸಂದರ್ಭದಲ್ಲಿಯಷ್ಟೇ ಕೋರ್ಟ್ ಆರೋಪಪಟ್ಟಿಯನ್ನು ಗಣನೆಗೆ ತೆಗೆದುಕೊಳ್ಳಬಹುದಾಗಿದೆ. ಈ ಪ್ರಕರಣದಲ್ಲಿ ತನಿಖೆಯು ಇನ್ನು ಪೂರ್ಣಗೊಂಡಿಲ್ಲ. ಹೀಗಾಗಿ, ಅರ್ಜಿದಾರರರು ಜಾಮೀನು ಪಡೆಯಲು ಅರ್ಹರಾಗಿದ್ದಾರೆ ಎಂದು ಪ್ರತಿಪಾದಿಸಿದರು.</p>.<p>ಅಲ್ಲದೆ, ವಿಚಾರಣೆಗಾಗಿ ವಾಧ್ವಾನ್ ಸಹೋದರರನ್ನು ವಶಕ್ಕೆ ಪಡೆಯುವ ಅಗತ್ಯವೂ ಇಲ್ಲ ಎಂದು ವಾದಿಸಿದರು. ಸಿಬಿಐ ಪರವಾಗಿ ಹಾಜರಿದ್ದ ಅನಿಲ್ ಸಿಂಗ್ ಅವರು, ಜಾಮೀನು ನೀಡುವುದಕ್ಕೆ ವಿರೋಧಿಸಿದರು. ಸಿಬಿಐ ಎಲ್ಲ ಅಗತ್ಯ ಮಾನದಂಡಗಳನ್ನು ಪಾಲಿಸಿದೆ ಎಂದು ವಾದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>