ಹೌದು, ವಿದೇಶಾಂಗ ಸೇವೆಯಲ್ಲಿ ಬದಲಾವಣೆ ಆಗಿದೆ, ಆದರೆ...: ಜೈಶಂಕರ್ ಹೇಳಿದ್ದೇನು?

ನವದೆಹಲಿ: ಭಾರತೀಯ ವಿದೇಶಾಂಗ ಸೇವೆಯಲ್ಲಿ ಬದಲಾವಣೆಯಾಗಿದೆ ಎಂದು ಯುರೋಪ್ನ ಅಧಿಕಾರಿಗಳು ಹೇಳಿದ್ದರು ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಗೆ ವಿದೇಶಾಂಗ ಇಲಾಖೆ ಸಚಿವ ಜೈಶಂಕರ್ ತಿರುಗೇಟು ನೀಡಿದ್ದಾರೆ.
'ಹೌದು, ಭಾರತೀಯ ವಿದೇಶಾಂಗ ಸೇವೆ ಬದಲಾಗಿದೆ. ವಿದೇಶಾಂಗ ಇಲಾಖೆ ಅಧಿಕಾರಿಗಳು ಸರ್ಕಾರದ ಆದೇಶವನ್ನು ಮಾತ್ರ ಪಾಲಿಸುತ್ತಾರೆ. ಅವರು ಇತರರ ವಾದಗಳನ್ನು ವಿರೋಧಿಸುತ್ತಾರೆ. ಅದನ್ನು ಅಹಂಕಾರ ಎಂದು ಕರೆಯಲು ಸಾಧ್ಯವಿಲ್ಲ. ಅದಕ್ಕೆ ನಂಬಿಕೆ ಎನ್ನಲಾಗುತ್ತದೆ. ಮತ್ತು, ರಾಷ್ಟ್ರೀಯ ಹಿತಾಸಕ್ತಿ ರಕ್ಷಣೆ ಎನ್ನುವುದು ಇದನ್ನೇ' ಎಂದು ಅವರು ಹೇಳಿದ್ದಾರೆ.
I was talking to bureaucrats from Europe and they said the Indian Foreign Service has completely changed & won’t listen to anything, they're arrogant. Now they just tell us what orders they're getting, there's no conversation; you can’t do that: Rahul Gandhi in London on 20th May pic.twitter.com/BGzEXbgnaE
— ANI (@ANI) May 21, 2022
ಲಂಡನ್ನಲ್ಲಿ ನಡೆದ ‘ಐಡಿಯಾಸ್ ಫಾರ್ ಇಂಡಿಯಾ ಕಾನ್ಕ್ಲೇವ್’ ಕಾರ್ಯಕ್ರಮದ ಸಂವಾದದಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ ಅವರು, ‘ನಾನು ಯುರೋಪ್ನ ಅಧಿಕಾರಿಗಳೊಂದಿಗೆ ಮಾತನಾಡುತ್ತಿದ್ದೆ, ಭಾರತೀಯ ವಿದೇಶಾಂಗ ಸೇವೆಯು ಸಂಪೂರ್ಣ ಬದಲಾಗಿದೆ ಮತ್ತು ಅಧಿಕಾರಿಗಳು ಏನನ್ನೂ ಕೇಳಿಸಿಕೊಳ್ಳುವುದಿಲ್ಲ. ಅವರು ಉದ್ಧಟರಾಗಿದ್ದಾರೆ ಎಂದು ಅವರು ಹೇಳಿದರು. ಅವರಿಗೆ ನೀಡಲಾದ ಆದೇಶಗಳನ್ನು ಮಾತ್ರವೇ ನಮಗೆ ತಿಳಿಸುತ್ತಾರೆ ಎಂದರು. ಈ ರೀತಿ ಮಾಡುವುದು ಸರಿಯಲ್ಲ’ ಎಂದಿದ್ದರು.
Yes, the Indian Foreign Service has changed.
Yes, they follow the orders of the Government.
Yes, they counter the arguments of others.
No, its not called Arrogance.
It is called Confidence.
And it is called defending National Interest. pic.twitter.com/eYynoKZDoW
— Dr. S. Jaishankar (@DrSJaishankar) May 21, 2022
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.