ಇದು ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದ ಯೋಜನೆಯಾಗಿದೆ. ಹೀಗಾಗಿ, ಯೋಜನೆ ಅನುಷ್ಠಾನಕ್ಕೆ 2006ರ ಪರಿಸರ ಪರಿಣಾಮ ಮೌಲ್ಯಮಾಪನ (ಇಐಎ) ಅಧಿಸೂಚನೆ ಹಾಗೂ 2009ರ ತಿದ್ದುಪಡಿ ಅನ್ವಯವಾಗುವುದಿಲ್ಲ. ಹೀಗಾಗಿ, ಈ ಯೋಜನೆಗೆ ‘ಪರಿಸರ ಅನುಮತಿ’ಯಿಂದ ವಿನಾಯಿತಿ ನೀಡಲಾಗಿದೆ ಎಂದು ಕೇಂದ್ರ ಜಲ ಶಕ್ತಿ ಖಾತೆ ರಾಜ್ಯ ಸಚಿವ ಪ್ರಹ್ಲಾದ ಸಿಂಗ್ ಪಟೇಲ್ ತಿಳಿಸಿದ್ದಾರೆ.