ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ಲ ಔಷಧ ಪದ್ಧತಿಗಳನ್ನೂ ಗೌರವಿಸುತ್ತೇನೆ: ಬಾಬಾ ರಾಮ್‌ದೇವ್‌

Last Updated 23 ಮೇ 2021, 20:55 IST
ಅಕ್ಷರ ಗಾತ್ರ

ನವದೆಹಲಿ: ‘ನಾನು ಎಲ್ಲ ರೀತಿಯ ಔಷಧೀಯ ಪದ್ಧತಿಗಳನ್ನು ಗೌರವಿಸುತ್ತೇನೆ. ಕೋವಿಡ್‌–19 ಪಿಡುಗಿನ ಸಂದರ್ಭದಲ್ಲಿ ಅಲೋಪಥಿ ಔಷಧ ಪದ್ಧತಿಯು ಸಾಕಷ್ಟು ಜನರ ಜೀವ ಉಳಿಸಿದೆ’ ಎಂದು ಯೋಗ ಗುರು ಬಾಬಾ ರಾಮ್‌ದೇವ್‌ ಭಾನುವಾರ ಹೇಳಿದ್ದಾರೆ.

ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್‌, ‘ಬಾಬಾ ರಾಮ್‌ದೇವ್‌ ಅವರು ಈ ರೀತಿ ಹೇಳಿಕೆ ನೀಡಿದ್ದು ದುರದೃಷ್ಟಕರ’ ಎಂದು ಭಾನುವಾರ ಪ್ರತಿಕ್ರಿಯಿಸಿದ್ದರು. ಕೂಡಲೇ ಅವರು ತಮ್ಮ ಹೇಳಿಕೆಯನ್ನು ಹಿಂತೆಗೆದುಕೊಳ್ಳಬೇಕು ಎಂದೂ ಆಗ್ರಹಿಸಿದ್ದರು. ಇದರ ಬೆನ್ನಲ್ಲೇ ರಾಮ್‌ದೇವ್‌ ಅವರಿಂದ ಈ ಹೇಳಿಕೆ ಹೊರಬಿದ್ದಿದೆ.

ರಾಮ್‌ದೇವ್‌ ಅವರು, ‘ಆಧುನಿಕ ವೈದ್ಯಕೀಯ ಪದ್ಧತಿಯನ್ನು ‘ಅವಿವೇಕಿ ವಿಜ್ಞಾನ’ ಎಂದು ಕರೆದಿದ್ದರು’ ಎನ್ನಲಾದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿತ್ತು. ಅವರ ಈ ಹೇಳಿಕೆಯನ್ನು ಭಾರತೀಯ ವೈದ್ಯಕೀಯ ಸಂಸ್ಥೆ (ಐಎಂಎ) ಖಂಡಿಸಿತ್ತು.

ಅಲ್ಲದೇ, ದೆಹಲಿ ವೈದ್ಯಕೀಯ ಸಂಘವು (ಡಿಎಂಎ) ದೆಹಲಿಯ ದರಿಯಾಗಂಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT