<p><strong>ಲಖನೌ:</strong> ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಅಡಳಿತದಲ್ಲಿ ಉತ್ತರಪ್ರದೇಶವು ಹೂಡಿಕೆಯ ನೆಚ್ಚಿನ ತಾಣವಾಗಿ ಬದಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅಭಿಪ್ರಾಯಪಟ್ಟಿದ್ದಾರೆ.</p>.<p>ನಡ್ಡಾ ಅವರು ಇಂದು (ಶನಿವಾರ) ತಮ್ಮ ಪಕ್ಷದ ಜಿಲ್ಲಾ ಘಟಕಗಳ ಅಧ್ಯಕ್ಷರು ಮತ್ತು ಸ್ಥಳೀಯ ನಾಯಕರೊಂದಿಗೆ ಮಾತುಕತೆ ನಡೆಸಿದರು.</p>.<p>ಈ ವೇಳೆನಡ್ಡಾ ಅವರು,ʼಉದ್ಯಮಸ್ನೇಹಿರಾಜ್ಯಗಳ ಪಟ್ಟಿಯಲ್ಲಿಉತ್ತರ ಪ್ರದೇಶವುಇಂದು ಎರಡನೇ ಸ್ಥಾನದಲ್ಲಿದೆ. ತಲಾದಾಯವು ದ್ವಿಗುಣಗೊಂಡಿದೆ. ರಾಜ್ಯವು ಯೋಗಿ ಸರ್ಕಾರದ ಅಡಿಯಲ್ಲಿ ಹೂಡಿಕೆಯ ನೆಚ್ಚಿನ ತಾಣವಾಗಿ ಬದಲಾಗಿದೆʼ ಎಂದು ಹೇಳಿದ್ದಾರೆ.</p>.<p>ಉತ್ತರಪ್ರದೇಶವು ʼಒಂದು ರಾಷ್ಟ್ರ-ಒಂದು ಪಡಿತರ ಚೀಟಿʼ ಯೋಜನೆಯನ್ನು ಅಳವಡಿಸಿಕೊಂಡ ಮೊದಲ ರಾಜ್ಯವೂ ಹೌದು ಎಂದು ಶ್ಲಾಘಿಸಿದ್ದಾರೆ.</p>.<p>ಮುಂದುವರಿದು, ʼನಿಮ್ಮ ಕ್ಷೇತ್ರಗಳಲ್ಲಿ ಶೌಚಾಲಯಗಳನ್ನು ನಿರ್ಮಿಸುವುದು ಹಾಗೂಅಡುಗೆ ಅನಿಲ ಸೌಲಭ್ಯ ಹೊಂದಿಲ್ಲದವರನ್ನು ಗುರುತಿಸಿ ಸೌಲಭ್ಯವನ್ನು ತಲುಪಿಸುವ ಹೊಣೆನಿಮ್ಮದೇʼ ಎಂದುಜಿಲ್ಲಾ ಘಟಕಗಳ ಅಧ್ಯಕ್ಷರು ಮತ್ತು ಸ್ಥಳೀಯ ನಾಯಕರಿಗೆ ನಡ್ಡಾ ಸೂಚಿಸಿದರು.</p>.<p>ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಪ್ರಕಟಗೊಂಡʼಉದ್ಯಮಸ್ನೇಹಿʼ ರಾಜ್ಯಗಳ ಪಟ್ಟಿಯಲ್ಲಿ ಆಂಧ್ರಪ್ರದೇಶ ಮೊದಲನೇ ಮತ್ತುಉತ್ತರಪ್ರದೇಶ ಎರಡನೇ ಸ್ಥಾನದಲ್ಲಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಅಡಳಿತದಲ್ಲಿ ಉತ್ತರಪ್ರದೇಶವು ಹೂಡಿಕೆಯ ನೆಚ್ಚಿನ ತಾಣವಾಗಿ ಬದಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅಭಿಪ್ರಾಯಪಟ್ಟಿದ್ದಾರೆ.</p>.<p>ನಡ್ಡಾ ಅವರು ಇಂದು (ಶನಿವಾರ) ತಮ್ಮ ಪಕ್ಷದ ಜಿಲ್ಲಾ ಘಟಕಗಳ ಅಧ್ಯಕ್ಷರು ಮತ್ತು ಸ್ಥಳೀಯ ನಾಯಕರೊಂದಿಗೆ ಮಾತುಕತೆ ನಡೆಸಿದರು.</p>.<p>ಈ ವೇಳೆನಡ್ಡಾ ಅವರು,ʼಉದ್ಯಮಸ್ನೇಹಿರಾಜ್ಯಗಳ ಪಟ್ಟಿಯಲ್ಲಿಉತ್ತರ ಪ್ರದೇಶವುಇಂದು ಎರಡನೇ ಸ್ಥಾನದಲ್ಲಿದೆ. ತಲಾದಾಯವು ದ್ವಿಗುಣಗೊಂಡಿದೆ. ರಾಜ್ಯವು ಯೋಗಿ ಸರ್ಕಾರದ ಅಡಿಯಲ್ಲಿ ಹೂಡಿಕೆಯ ನೆಚ್ಚಿನ ತಾಣವಾಗಿ ಬದಲಾಗಿದೆʼ ಎಂದು ಹೇಳಿದ್ದಾರೆ.</p>.<p>ಉತ್ತರಪ್ರದೇಶವು ʼಒಂದು ರಾಷ್ಟ್ರ-ಒಂದು ಪಡಿತರ ಚೀಟಿʼ ಯೋಜನೆಯನ್ನು ಅಳವಡಿಸಿಕೊಂಡ ಮೊದಲ ರಾಜ್ಯವೂ ಹೌದು ಎಂದು ಶ್ಲಾಘಿಸಿದ್ದಾರೆ.</p>.<p>ಮುಂದುವರಿದು, ʼನಿಮ್ಮ ಕ್ಷೇತ್ರಗಳಲ್ಲಿ ಶೌಚಾಲಯಗಳನ್ನು ನಿರ್ಮಿಸುವುದು ಹಾಗೂಅಡುಗೆ ಅನಿಲ ಸೌಲಭ್ಯ ಹೊಂದಿಲ್ಲದವರನ್ನು ಗುರುತಿಸಿ ಸೌಲಭ್ಯವನ್ನು ತಲುಪಿಸುವ ಹೊಣೆನಿಮ್ಮದೇʼ ಎಂದುಜಿಲ್ಲಾ ಘಟಕಗಳ ಅಧ್ಯಕ್ಷರು ಮತ್ತು ಸ್ಥಳೀಯ ನಾಯಕರಿಗೆ ನಡ್ಡಾ ಸೂಚಿಸಿದರು.</p>.<p>ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಪ್ರಕಟಗೊಂಡʼಉದ್ಯಮಸ್ನೇಹಿʼ ರಾಜ್ಯಗಳ ಪಟ್ಟಿಯಲ್ಲಿ ಆಂಧ್ರಪ್ರದೇಶ ಮೊದಲನೇ ಮತ್ತುಉತ್ತರಪ್ರದೇಶ ಎರಡನೇ ಸ್ಥಾನದಲ್ಲಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>