ಲಖನೌ: ಅಯೋಧ್ಯೆಯ ರಾಮ ಮಂದಿರವು ದೇಶದ ಪಾಲಿಗೆ ‘ರಾಷ್ಟ್ರ ಮಂದಿರ’ವಾಗಲಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದರು.
ಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ರಾಮ ಮಂದಿರದಲ್ಲಿ 'ಗರ್ಭಗುಡಿ' ನಿರ್ಮಾಣಕ್ಕೆ ಅಡಿಗಲ್ಲು ಹಾಕುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ರಾಮ ಮಂದಿರವು ಜಗತ್ತಿನಲ್ಲಿ ಸನಾತನ ಧರ್ಮವನ್ನು ಅನುಸರಿಸುವವರ ನಂಬಿಕೆಯ ತಾಣವಾಗಲಿದೆ. ರಾಮ ಮಂದಿರ ಚಳವಳಿಯಲ್ಲಿ ಭಾಗವಹಿಸಿದ್ದ ಪ್ರತಿಯೊಬ್ಬರೂ ಇಂದು ತುಂಬಾ ಸಂತಸ ಹೊಂದಿರುತ್ತಾರೆ ಎಂದು ಅವರು ಹೇಳಿದರು.