ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿಪಕ್ಷ ನಾಯಕರ ಲಖಿಂಪುರ ಭೇಟಿ ಫೋಟೊ ರಾಜಕಾರಣವೆಂದ ಯೋಗಿ ಆದಿತ್ಯನಾಥ್

Last Updated 8 ಅಕ್ಟೋಬರ್ 2021, 9:48 IST
ಅಕ್ಷರ ಗಾತ್ರ

ಲಖನೌ: ಫೋಟೊಗೆ ಪೋಸ್ ನೀಡಲು, ರಾಜಕೀಯ ಲಾಭಕ್ಕೋಸ್ಕರ ಪ್ರತಿಪಕ್ಷಗಳ ನಾಯಕರು ಲಖಿಂಪುರ ಖೇರಿಗೆ ಭೇಟಿ ನೀಡುತ್ತಿದ್ದಾರೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟೀಕಿಸಿದ್ದಾರೆ.

ಕಾಂಗ್ರೆಸ್ ನಾಯಕರು ಲಖಿಂಪುರ ಖೇರಿಗೆ ಭೇಟಿ ನೀಡಿರುವುದು ನಾಚಿಕೆಗೇಡಿನ ಸಂಗತಿ. ಛತ್ತೀಸಗಡ ಹೊತ್ತಿ ಉರಿಯುತ್ತಿರುವಾಗ ಅಲ್ಲಿನ ಮುಖ್ಯಮಂತ್ರಿ ಭೂಪೇಶ್ ಬಘೆಲ್ ಉತ್ತರ ಪ್ರದೇಶದಲ್ಲಿದ್ದಾರೆ ಎಂದು ಯೋಗಿ ಹೇಳಿದ್ದಾರೆ.

ಉತ್ತರ ಪ್ರದೇಶ ಸರ್ಕಾರವು ಏನನ್ನೂ ಮುಚ್ಚಿಡುತ್ತಿಲ್ಲ. ಪ್ರತಿಪಕ್ಷಗಳು ಪಟ್ಟಭದ್ರ ಹಿತಾಸಕ್ತಿ ಹೊಂದಿವೆ ಎಂದು ಅವರು ಟೀಕಿಸಿದ್ದಾರೆ.

ತಪ್ಪಿತಸ್ಥರನ್ನು ಬಂಧಿಸಲಾಗುವುದು. ಯಾರೇ ಆಗಲಿ, ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಅವಕಾಶವಿಲ್ಲ ಎಂದು ಯೋಗಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT