<p><strong>ಲಖನೌ: </strong>ಮಥುರಾದಲ್ಲಿ ಮದ್ಯ ಮತ್ತು ಮಾಂಸ ಮಾರಾಟ ಮಾಡುವುದಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಂಪೂರ್ಣವಾಗಿ ನಿಷೇಧ ಹೇರಿದ್ದಾರೆ.</p>.<p>ಧಾರ್ಮಿಕ ನಗರವಾದ ಮಥುರಾದಲ್ಲಿ ಮದ್ಯ ಮತ್ತು ಮಾಂಸ ಮಾರಾಟಗಾರರು ಹಾಲು ಮಾರಾಟ ಮಾಡುವಂತೆ ಅವರು ಸಲಹೆ ನೀಡಿದ್ದಾರೆ.</p>.<p>ಶ್ರೀಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಮಥುರಾದ ಬಂಕೆ ಬಿಹಾರಿ ದೇಗುಲದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮದ್ಯ ಮತ್ತು ಮಾಂಸ ಮಾರಾಟಗಾರರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.</p>.<p>‘ಮಥುರಾದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವೈಭವವನ್ನು ಕಾಪಾಡಲು ಮದ್ಯ ಮತ್ತು ಮಾಂಸ ಮಾರಾಟವನ್ನು ನಿಷೇಧಿಸುವುದು ಅತ್ಯಗತ್ಯ' ಎಂದೂ ಯೋಗಿ ಆದಿತ್ಯನಾಥ್ ಅವರು ಪ್ರತಿಪಾದಿಸಿದ್ದಾರೆ.</p>.<p>ರಾಜ್ಯ ಸರ್ಕಾರವು ಅಯೋಧ್ಯೆ, ಚಿತ್ರಕೂಟ ಮತ್ತು ಇತರ ಧಾರ್ಮಿಕ ನಗರಗಳಲ್ಲೂ ಇದೇ ರೀತಿ ನಿಷೇಧ ಹೇರಲು ಚಿಂತನೆ ನಡೆಸಿದೆ ಎಂದು ಮೂಲಗಳು ಹೇಳಿವೆ.</p>.<p>ಯೋಗಿ ಆದಿತ್ಯನಾಥ್ ಅವರ ಈ ನಿರ್ಧಾರವನ್ನು ಅಯೋಧ್ಯೆಯ ಸಂತರು ಸ್ವಾಗತಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ: </strong>ಮಥುರಾದಲ್ಲಿ ಮದ್ಯ ಮತ್ತು ಮಾಂಸ ಮಾರಾಟ ಮಾಡುವುದಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಂಪೂರ್ಣವಾಗಿ ನಿಷೇಧ ಹೇರಿದ್ದಾರೆ.</p>.<p>ಧಾರ್ಮಿಕ ನಗರವಾದ ಮಥುರಾದಲ್ಲಿ ಮದ್ಯ ಮತ್ತು ಮಾಂಸ ಮಾರಾಟಗಾರರು ಹಾಲು ಮಾರಾಟ ಮಾಡುವಂತೆ ಅವರು ಸಲಹೆ ನೀಡಿದ್ದಾರೆ.</p>.<p>ಶ್ರೀಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಮಥುರಾದ ಬಂಕೆ ಬಿಹಾರಿ ದೇಗುಲದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮದ್ಯ ಮತ್ತು ಮಾಂಸ ಮಾರಾಟಗಾರರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.</p>.<p>‘ಮಥುರಾದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವೈಭವವನ್ನು ಕಾಪಾಡಲು ಮದ್ಯ ಮತ್ತು ಮಾಂಸ ಮಾರಾಟವನ್ನು ನಿಷೇಧಿಸುವುದು ಅತ್ಯಗತ್ಯ' ಎಂದೂ ಯೋಗಿ ಆದಿತ್ಯನಾಥ್ ಅವರು ಪ್ರತಿಪಾದಿಸಿದ್ದಾರೆ.</p>.<p>ರಾಜ್ಯ ಸರ್ಕಾರವು ಅಯೋಧ್ಯೆ, ಚಿತ್ರಕೂಟ ಮತ್ತು ಇತರ ಧಾರ್ಮಿಕ ನಗರಗಳಲ್ಲೂ ಇದೇ ರೀತಿ ನಿಷೇಧ ಹೇರಲು ಚಿಂತನೆ ನಡೆಸಿದೆ ಎಂದು ಮೂಲಗಳು ಹೇಳಿವೆ.</p>.<p>ಯೋಗಿ ಆದಿತ್ಯನಾಥ್ ಅವರ ಈ ನಿರ್ಧಾರವನ್ನು ಅಯೋಧ್ಯೆಯ ಸಂತರು ಸ್ವಾಗತಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>