‘ಈ ಹಿಂದೆ ರೈತ ಸಂಘಟನೆಗಳೊಂದಿಗೆ ಮುಖ್ಯಮಂತ್ರಿ ಸಂವಾದ ನಡೆಸಿದಾಗ ಬೆಳೆ ತ್ಯಾಜ್ಯ ಸುಡುವ ಪ್ರಕರಣದಲ್ಲಿ ರೈತರ ಮೇಲೆ ದಾಖಲಾಗಿರುವ ಮೊಕದ್ದಮೆಗಳನ್ನು ಹಿಂಪಡೆಯುವುದಾಗಿ ಹೇಳಿದ್ದರು. ಹಾಗೆಯೇ, ರೈತರ ಮೇಲೆ ವಿಧಿಸಿರುವ ದಂಡವನ್ನು ಕೈಬಿಡುವ ನಿರ್ಧಾರವನ್ನು ತೆಗೆದುಕೊಳ್ಳುವ ಬಗ್ಗೆ ತಿಳಿಸಿದ್ದರು‘ ಎಂದುಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.