‘ಹತ್ರಾಸ್, ಶಹಜಹಾನ್ಪುರ ಮತ್ತು ಗೋರಖ್ಪುರಗಳಲ್ಲಿ ಒಂದರ ನಂತರ ಒಂದರಂತೆ ಅತ್ಯಾಚಾರದ ಘಟನೆಗಳು ನಡೆಯುತ್ತಿದ್ದು, ಈ ಘಟನೆಗಳು ರಾಜ್ಯವನ್ನೇ ಬೆಚ್ಚಿಬೀಳಿಸಿವೆ‘ ಎಂದು ದೂರಿದ ಪ್ರಿಯಾಂಕ ವಾದ್ರಾ, ‘ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಮಹಿಳೆಯರಿಗೆ ಸುರಕ್ಷತೆ ಇಲ್ಲ. ಅಪರಾಧಿಗಳು ಬಹಿರಂಗವಾಗಿ ಅಪರಾಧಗಳನ್ನು ಮಾಡುತ್ತಿದ್ದಾರೆ‘ ಎಂದು ಆರೋಪಿಸಿದ್ದಾರೆ. ‘ರಾಜ್ಯದ ಮಹಿಳೆಯರ ಸುರಕ್ಷತೆ ನಿಮ್ಮ ಜವಾಬ್ದಾರಿ‘ ಎಂದು ಟ್ವೀಟ್ ಮಾಡಿದ್ದಾರೆ.