ಸೋಮವಾರ, 13 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುದುರೆಗಳ ಓಟಕ್ಕೆ ಕತ್ತೆ ತಂದಿದ್ದೀರಿ: ರಾಹುಲ್ ಕುರಿತಂತೆ ಹರ್ದೀಪ್ ಲೇವಡಿ

Last Updated 27 ಮಾರ್ಚ್ 2023, 12:19 IST
ಅಕ್ಷರ ಗಾತ್ರ

ನವದೆಹಲಿ: ಕುದುರೆಗಳ ಓಟಕ್ಕೆ ಕತ್ತೆ ತಂದಿದ್ದೀರಿ ಎಂದು ಕೇಂದ್ರದ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ, ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ನಾನು ಸಾವರ್ಕರ್ ಅಲ್ಲ, ಗಾಂಧಿ, ಗಾಂಧಿ ಕ್ಷಮೆ ಕೇಳುವುದಿಲ್ಲ ಎಂಬ ರಾಹುಲ್ ಹೇಳಿಕೆ ಬೆನ್ನಲ್ಲೇ ಕೇಂದ್ರ ಸಚಿವರು ಈ ಹೇಳಿಕೆ ನೀಡಿದ್ದಾರೆ.

‘ದೇಶಕ್ಕೆ ಸಾವರ್ಕರ್ ಅವರಂತಹ ನಾಯಕರ ಕೊಡುಗೆ ಏನೆಂಬುದು ಎಲ್ಲರಿಗೂ ತಿಳಿದಿದೆ. ಕುದುರೆಗಳ ಓಟಕ್ಕೆ ಕತ್ತೆ ತಂದಿದ್ದೀರಿ' ಎಂದು ರಾಹುಲ್ ಕುರಿತಂತೆ ಹರ್ದೀಪ್ ನೀಡಿರುವ ಹೇಳಿಕೆಯ ವಿಡಿಯೊವನ್ನು ಎಎನ್‌ಐ ಹಂಚಿಕೊಂಡಿದೆ.

ರಾಹುಲ್ ಗಾಂಧಿ ಅನರ್ಹತೆ ಪ್ರಶ್ನಿಸಿ ವಿರೋಧ ಪಕ್ಷಗಳ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಅವರು, ಗಂಭೀರವಾದ ಆತ್ಮಾವಲೋಕನ ಮಾಡಿಕೊಳ್ಳಿ. ಯಾರು, ಏನೆಂಬುದನ್ನು ಜನ ನಿರ್ಧರಿಸುತ್ತಾರೆ ಎಂದು ಕಾಂಗ್ರೆಸ್ ನಾಯಕರನ್ನು ಉದ್ದೇಶಿಸಿ ಹೇಳಿದರು.

ಯಾವುದೇ ವ್ಯಕ್ತಿ ವಿದೇಶಕ್ಕೆ ಹೋದಾಗ ವಾಕ್ ಸ್ವಾತಂತ್ರ್ಯದ ಜೊತೆಗೆ ಜವಾಬ್ದಾರಿಯ ಪ್ರಜ್ಞೆಯೂ ಇರಬೇಕು. ನಮ್ಮದು ವಿಶ್ವದ ಅತ್ಯಂತ ಹಳೆಯ ಪ್ರಜಾಪ್ರಭುತ್ವ. ಆದರೆ, ರಾಹುಲ್ ಗಾಂಧಿ ಬ್ರಿಟನ್‌ಗೆ ಹೋದಾಗ ಭಾರತದಲ್ಲಿ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಯುತ್ತಿದೆ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿ ಈ ಬಗ್ಗೆ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ ಕೇಂದ್ರ ಸಚಿವರು, ಇಂದಿರಾ ಗಾಂಧಿ ಆಡಳಿತಾವಧಿಯಲ್ಲಿ ನಾಗರಿಕರ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲಾಗಿತ್ತು ಎಂಬುದನ್ನು ಕಾಂಗ್ರೆಸ್ಸಿಗರಿಗೆ ನೆನಪಿಸಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಮೋದಿ ಉಪನಾಮ ವ್ಯಂಗ್ಯ ಮಾಡಿದ್ದ ಪ್ರಕರಣದಲ್ಲಿ ಗುಜರಾತ್‌ನ ಸೂರತ್ ನ್ಯಾಯಾಲಯ ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಬಳಿಕ, ಅವರನ್ನು ಲೋಕಸಭಾ ಸದಸ್ಯತ್ವದಿಂದಲೂ ಅನರ್ಹಗೊಳಿಸಲಾಗಿದೆ. ಇದನ್ನು ಖಂಡಿಸಿ ದೇಶದಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT