ಮುಂಬೈ: ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿ ಸರ್ಕಾರಕ್ಕೆ ಶಿವಸೇನೆಯ ಬಂಡುಕೋರ ಶಾಸಕರಿಂದ ಸಂಕಷ್ಟ ಎದುರಾಗಿರುವ ಹೊತ್ತಿನಲ್ಲಿ ಶಿವಸೇನೆ ಉನ್ನತ ನಾಯಕ ಸಂಜಯ್ ರಾವುತ್ ಮನೆ ಮುಂದೆ ಹಾಕಿದ್ದ ಒಂದು ಬ್ಯಾನರ್ ವೈರಲ್ ಆಗಿದೆ.
‘ನಿಮ್ಮ ಸೊಕ್ಕು ಇನ್ನು ನಾಲ್ಕೇ ದಿನ, ನಮ್ಮ ರಾಜ ಬರುತ್ತಿದ್ದಾನೆ’ ಎಂಬ ಬರಹವುಳ್ಳ ಬ್ಯಾನರ್ನ್ನು ಸಂಜಯ್ ರಾವುತ್ ಮನೆ ಮುಂದೆ ನೇತು ಹಾಕಲಾಗಿದೆ.
ಈ ಬ್ಯಾನರ್ ಅನ್ನು ಮುಂಬೈ ಮಹಾನಗರ ಪಾಲಿಕೆಯ ಸದಸ್ಯೆ ದೀಪಮಾಲಾ ಬಢೆ ಎನ್ನುವುವರ ಹೆಸರಿನಲ್ಲಿ ಹಾಕಲಾಗಿದೆ. ಈ ಬಗ್ಗೆ ಸಂಜಯ್ ರಾವುತ್ ಪ್ರತಿಕ್ರಿಯೆ ನೀಡಿಲ್ಲ.
ಈಗಾಗಲೇಮಹಾರಾಷ್ಟ್ರ ಸರ್ಕಾರದ ರಾಜಕೀಯ ಅಸ್ಥಿರತೆ ಕುರಿತಂತೆ ಹಲವು ಬೆಳವಣಿಗೆಗಳು ನಡೆದಿದ್ದು, ಬುಧವಾರ ಮಧ್ಯಾಹ್ನ ಸಿಎಂ ಠಾಕ್ರೆ ಅವರು ರಾಜ್ಯ ಸಚಿವ ಸಂಪುಟ ಸಭೆ ಕರೆದಿದ್ದಾರೆ.
ಸಚಿವ ಏಕನಾಥ್ ಶಿಂಧೆ ಅವರು ತಮಗೆ 40 ಶಾಸಕರ ಬೆಂಬಲ ಇದೆ ಎಂದು ತಿಳಿಸಿದ್ದಾರೆ.ಸೂರತ್ನಿಂದ ಶಿಂಧೆ ಮತ್ತು ಬೆಂಬಲಿಗ ಶಾಸಕರು, ಚಾರ್ಟರ್ಡ್ ವಿಮಾನದಲ್ಲಿ ಗುವಾಹಟಿಗೆ ತೆರಳಿದ್ದಾರೆ.ಅವರು ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಭೇಟಿಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ.