ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯ ಪ್ರದೇಶ: ನೂಪುರ್ ಶರ್ಮಾರನ್ನು ಬೆಂಬಲಿಸಿದ ವ್ಯಕ್ತಿಯ ಮೇಲೆ ದಾಳಿ

Last Updated 21 ಜುಲೈ 2022, 2:59 IST
ಅಕ್ಷರ ಗಾತ್ರ

ಅಗರ್ ಮಾಲ್ವಾ: ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾರನ್ನು ಬೆಂಬಲಿಸಿದ ಕಾರಣಕ್ಕೆ ಮಧ್ಯ ಪ್ರದೇಶದಲ್ಲಿ ವ್ಯಕ್ತಿಯೋರ್ವರ ಮೇಲೆ ಹಲ್ಲೆ ನಡೆದಿದೆ.

ಆಯುಷ್ ಜಾದಮ್ ಎನ್ನುವವರ ಮೇಲೆ ಗುಂಪೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದೆ.

ದಾಳಿಗೆ ಒಳಗಾದ ಆಯುಷ್ ಅವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪ್ರವಾದಿ ಮಹಮ್ಮದ್ ವಿರುದ್ಧ ಆಕ್ಷೇಪಾರ್ಹ ಮಾತುಗಳನ್ನು ಆಡಿದ್ದ ನೂಪುರ್ ಶರ್ಮಾರನ್ನು ಆಯುಷ್ ಬೆಂಬಲಿಸಿದ್ದರು. ಅದಕ್ಕಾಗಿ ಆಯುಷ್ ಮೇಲೆ ಹಲ್ಲೆ ನಡೆದಿದೆ ಎಂದು ಅಗರ್ ಮಾಲ್ವಾ ಪೊಲೀಸ್ ವರಿಷ್ಠಾಧಿಕಾರಿ ರಾಕೇಶ್ ಸಾಗರ್ ತಿಳಿಸಿದ್ದಾರೆ.

ದಾಳಿಗೆ ಸಂಬಂಧಿಸಿ ದೂರು ನೀಡಲಾಗಿದ್ದು, 13 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಅವರಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT