ಸ್ಮೃತಿ ಇರಾನಿ ಅವರ ಮಗಳು ಗೋವಾದಲ್ಲಿ ಅಕ್ರಮವಾಗಿ ಬಾರ್ ನಡೆಸುತ್ತಿದ್ದಾರೆ ಎಂದು ಶನಿವಾರ ಆರೋಪಿಸಿದ್ದ ಕಾಂಗ್ರೆಸ್, ಇರಾನಿ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿತ್ತು. ಆದರೆ, ಕಾಂಗ್ರೆಸ್ ಆರೋಪಗಳನ್ನು ಸ್ಮೃತಿ ಇರಾನಿ ಅಲ್ಲಗಳೆದಿದ್ದರು. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ₹5,000 ಕೋಟಿ ಲೂಟಿ ಮಾಡಿದ್ದಾರೆ ಎಂದು ಹೇಳಿದ್ದಕ್ಕಾಗಿ ನನ್ನ ಮಗಳನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಅವರು ಪ್ರತ್ಯಾರೋಪ ಮಾಡಿದ್ದರು.