‘ಜಿತೇಂದ್ರ ತಿವಾರಿ ಅಲಿಯಾಸ್ ಜೀತು ಎಂಬಾತ ಪ್ರಧಾನಿಯ ಸಹೋದರನ ಹೆಸರಿನಲ್ಲಿ ಜನರಿಗೆ ವಂಚನೆ ಮಾಡುತ್ತಿದ್ದಾನೆ ಎಂಬ ಮಾಹಿತಿಯನ್ನು ಪ್ರಧಾನ ಮಂತ್ರಿ ಕಚೇರಿಯು ನೀಡಿತ್ತು. ಈ ಮಾಹಿತಿಯ ಆಧಾರದ ಮೇಲೆ ತಿವಾರಿಯನ್ನು ವಿಕಾಸ್ ಭವನದ ಬಳಿ ಸೋಮವಾರ ಬಂಧಿಸಲಾಗಿದೆ’ ಎಂದು ನಗರ ಪೊಲೀಸ್ ಠಾಣೆಯ ವರಿಷ್ಠಾಧಿಕಾರಿ ಭುಪೇಂದ್ರ ಸಿಂಗ್ ಅವರು ಹೇಳಿದರು.