<p><strong>ನವದೆಹಲಿ:</strong> ಉತ್ತರಾಖಂಡದ ಯುವಕರು ರಾಜ್ಯದಲ್ಲಿ ಉದ್ಯೋಗಾವಕಾಶಗಳ ಕೊರತೆಯಿಂದಾಗಿ ವಲಸೆ ಹೋಗುವಂತಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಹೇಳಿದರು.</p>.<p>ಭಾನುವಾರ ರಾಜ್ಯಕ್ಕೆ ಭೇಟಿ ನೀಡಿದಾಗ ಅವರೊಂದಿಗೆ ಮಾತನಾಡುವುದಾಗಿ ತಿಳಿಸಿದ ಅವರು, ಉತ್ತರಾಖಂಡದ ಯುವಕರು ರಾಜ್ಯದಲ್ಲಿಯೇ ಉದ್ಯೋಗ ಪಡೆಯುವಂತಾಗಬೇಕು ಎಂದರು.</p>.<p>'ನಾಳೆ ನಾನು ಉತ್ತರಾಖಂಡಕ್ಕೆ ಹೋಗುತ್ತಿದ್ದೇನೆ. ಯುವಕರು ಉದ್ಯೋಗಾವಕಾಶದ ಕೊರತೆಯಿಂದಾಗಿ ವಲಸೆ ಹೋಗುವಂತಾಗಿದೆ. ಉತ್ತರಾಖಂಡದ ಯುವಕರು ಅಲ್ಲಿಯೇ ಉದ್ಯೋಗವನ್ನು ಪಡೆಯಬೇಕು. ಸ್ಪಷ್ಟ ಉದ್ದೇಶ ಹೊಂದಿರುವ ಸರ್ಕಾರವಿದ್ದರೆ ಹೀಗಾಗುವುದು ಸಾಧ್ಯವಿದೆ. ನಾಳೆ ನಾನು ಯುವಕರೊಂದಿಗೆ ಮಾತನಾಡುತ್ತೇನೆ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.</p>.<p>ಮುಂದಿನ ವರ್ಷ ಉತ್ತರಾ ಖಂಡದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಎಎಪಿ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದು, ಅಭಿವೃದ್ಧಿ ಸಮಸ್ಯೆಗಳನ್ನು ಜನರ ಮುಂದಿಡಲಿದೆ ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಉತ್ತರಾಖಂಡದ ಯುವಕರು ರಾಜ್ಯದಲ್ಲಿ ಉದ್ಯೋಗಾವಕಾಶಗಳ ಕೊರತೆಯಿಂದಾಗಿ ವಲಸೆ ಹೋಗುವಂತಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಹೇಳಿದರು.</p>.<p>ಭಾನುವಾರ ರಾಜ್ಯಕ್ಕೆ ಭೇಟಿ ನೀಡಿದಾಗ ಅವರೊಂದಿಗೆ ಮಾತನಾಡುವುದಾಗಿ ತಿಳಿಸಿದ ಅವರು, ಉತ್ತರಾಖಂಡದ ಯುವಕರು ರಾಜ್ಯದಲ್ಲಿಯೇ ಉದ್ಯೋಗ ಪಡೆಯುವಂತಾಗಬೇಕು ಎಂದರು.</p>.<p>'ನಾಳೆ ನಾನು ಉತ್ತರಾಖಂಡಕ್ಕೆ ಹೋಗುತ್ತಿದ್ದೇನೆ. ಯುವಕರು ಉದ್ಯೋಗಾವಕಾಶದ ಕೊರತೆಯಿಂದಾಗಿ ವಲಸೆ ಹೋಗುವಂತಾಗಿದೆ. ಉತ್ತರಾಖಂಡದ ಯುವಕರು ಅಲ್ಲಿಯೇ ಉದ್ಯೋಗವನ್ನು ಪಡೆಯಬೇಕು. ಸ್ಪಷ್ಟ ಉದ್ದೇಶ ಹೊಂದಿರುವ ಸರ್ಕಾರವಿದ್ದರೆ ಹೀಗಾಗುವುದು ಸಾಧ್ಯವಿದೆ. ನಾಳೆ ನಾನು ಯುವಕರೊಂದಿಗೆ ಮಾತನಾಡುತ್ತೇನೆ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.</p>.<p>ಮುಂದಿನ ವರ್ಷ ಉತ್ತರಾ ಖಂಡದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಎಎಪಿ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದು, ಅಭಿವೃದ್ಧಿ ಸಮಸ್ಯೆಗಳನ್ನು ಜನರ ಮುಂದಿಡಲಿದೆ ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>