ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯೋಗದ ಕೊರತೆಯಿಂದಾಗಿ ಉತ್ತರಾಖಂಡದ ಯುವಕರು ವಲಸೆ ಹೋಗುವಂತಾಗಿದೆ: ಕೇಜ್ರಿವಾಲ್

Last Updated 18 ಸೆಪ್ಟೆಂಬರ್ 2021, 16:26 IST
ಅಕ್ಷರ ಗಾತ್ರ

ನವದೆಹಲಿ: ಉತ್ತರಾಖಂಡದ ಯುವಕರು ರಾಜ್ಯದಲ್ಲಿ ಉದ್ಯೋಗಾವಕಾಶಗಳ ಕೊರತೆಯಿಂದಾಗಿ ವಲಸೆ ಹೋಗುವಂತಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಹೇಳಿದರು.

ಭಾನುವಾರ ರಾಜ್ಯಕ್ಕೆ ಭೇಟಿ ನೀಡಿದಾಗ ಅವರೊಂದಿಗೆ ಮಾತನಾಡುವುದಾಗಿ ತಿಳಿಸಿದ ಅವರು, ಉತ್ತರಾಖಂಡದ ಯುವಕರು ರಾಜ್ಯದಲ್ಲಿಯೇ ಉದ್ಯೋಗ ಪಡೆಯುವಂತಾಗಬೇಕು ಎಂದರು.

'ನಾಳೆ ನಾನು ಉತ್ತರಾಖಂಡಕ್ಕೆ ಹೋಗುತ್ತಿದ್ದೇನೆ. ಯುವಕರು ಉದ್ಯೋಗಾವಕಾಶದ ಕೊರತೆಯಿಂದಾಗಿ ವಲಸೆ ಹೋಗುವಂತಾಗಿದೆ. ಉತ್ತರಾಖಂಡದ ಯುವಕರು ಅಲ್ಲಿಯೇ ಉದ್ಯೋಗವನ್ನು ಪಡೆಯಬೇಕು. ಸ್ಪಷ್ಟ ಉದ್ದೇಶ ಹೊಂದಿರುವ ಸರ್ಕಾರವಿದ್ದರೆ ಹೀಗಾಗುವುದು ಸಾಧ್ಯವಿದೆ. ನಾಳೆ ನಾನು ಯುವಕರೊಂದಿಗೆ ಮಾತನಾಡುತ್ತೇನೆ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಮುಂದಿನ ವರ್ಷ ಉತ್ತರಾ ಖಂಡದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಎಎಪಿ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದು, ಅಭಿವೃದ್ಧಿ ಸಮಸ್ಯೆಗಳನ್ನು ಜನರ ಮುಂದಿಡಲಿದೆ ಎಂದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT