ಈ ಚುನಾವಣೆ ಪ್ರಕ್ರಿಯೆಯಲ್ಲಿ ಯಾವುದೇ ವಿಶ್ವಾಸ ಉಳಿದಿಲ್ಲ. ರಾಜ್ಯ ಚುನಾವಣಾ ಆಯುಕ್ತರು ರಾಜ್ಯ ಸರ್ಕಾರದ ರಬ್ಬರ್ ಸ್ಟ್ಯಾಂಪ್ ಆಗಿದ್ದಾರೆ. ಹೊಸದಾಗಿ ಚುನಾವಣಾ ಅಧಿವೇಶನ ಹೊರಡಿಸಬೇಕು ಎಂದು ಆಗ್ರಹಿಸಿದ್ದ ಚಂದ್ರ ಬಾಬು ನಾಯ್ಡು ಅವರು, ಮತದಾನ ನಡೆಯುವ ಕೆಲವೇ ದಿನಗಳ ಮುನ್ನ ಪರಿಷತ್ ಚುನಾವಣೆಯಿಂದ ದೂರ ಉಳಿಯುವುದಾಗಿ ಘೋಷಿಸಿದ್ದರು. ಆದರೂ, ಚುನಾವಣಾ ಕಣದಲ್ಲಿ ಟಿಡಿಪಿ ಅಭ್ಯರ್ಥಿಗಳು ಉಳಿದಿದ್ದರು.