<p><strong>ಮುಂಬೈ</strong>; ಮುಂಬೈ ಕ್ರೂಸ್ ಹಡಗಿನ ಡ್ರಗ್ಸ್ ಪ್ರಕರಣದ ವಿಚಾರಣೆ ನಡೆಸುತ್ತಿರುವ ರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ದಳದ (ಎನ್.ಸಿ.ಬಿ) ಅಧಿಕಾರಿ ಸಮೀರ್ ವಾಂಖೆಡೆ ಅವರಿಗೆ ಝಡ್ ಮಾದರಿ ಭದ್ರತೆ ನೀಡಬೇಕು ಎಂಬ ಒತ್ತಾಯಗಳು ಕೇಳಿ ಬಂದಿವೆ.</p>.<p>ಟ್ವಿಟರ್ನಲ್ಲಿ ಇಂದು ಈ ವಿಷಯವಾಗಿ #ZSecurityForSameerWankhede,#Z_Plus_Security_4_Sameerji ಎಂಬ ಹ್ಯಾಶ್ ಟ್ಯಾಗ್ಗಳು ಟ್ರೆಂಡ್ ಆಗಿವೆ. ಸಮೀರ್ ವಾಂಖೆಡೆ ಅವರು ಎನ್.ಸಿ.ಬಿಯ ಮಹಾರಾಷ್ಟ್ರ ವಲಯದ ನಿರ್ದೇಶಕರಾಗಿದ್ದಾರೆ.</p>.<p>‘ಇದೊಂದು ಹೈ ಪ್ರೊಫೈಲ್ ಕೇಸ್ ಆಗಿದ್ದು, ದೊಡ್ಡ ದೊಡ್ಡ ಡ್ರಗ್ಸ್ ಡೀಲರ್ಗಳು, ಪೆಡ್ಲರ್ಗಳು ಸಮೀರ್ ವಾಂಖೆಡೆ ಅವರ ತನಿಖೆಯಿಂದ ಬೆಚ್ಚಿ ಬಿದ್ದಿದ್ದಾರೆ. ಹೀಗಾಗಿ ಡ್ರಗ್ಸ್ ಲೋಕದಿಂದ ಈ ಅಧಿಕಾರಿಗೆ ಏನು ಬೇಕಾದರೂ ಆಗಬಹುದು. ಹೀಗಾಗಿ ಅವರಿಗೆ ಹೆಚ್ಚಿನ ಭದ್ರತೆ ನೀಡಬೇಕು‘ ಎಂದು ಕೇಳಿಕೊಳ್ಳುತ್ತಿದ್ದಾರೆ.</p>.<p>‘ಮುಂಬೈ ಪೊಲೀಸರು ತಮ್ಮ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದಾರೆ’ ಎಂದುಸಮೀರ್ ವಾಂಖೆಡೆ ಆರೋಪಿಸಿದ ಬೆನ್ನಲ್ಲೆ ಈ ಅಭಿಯಾನ ಶುರುವಾಗಿದೆ.</p>.<p>ಏತನ್ಮಧ್ಯೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಹಾರಾಷ್ಟ್ರ ಗೃಹ ಸಚಿವ, ‘ಸಮೀರ್ ವಾಂಖೆಡೆ ನೀಡಿರುವ ದೂರು ನಮ್ಮ ಗಮನಕ್ಕೆ ಬಂದಿಲ್ಲ’ ಎಂದಿದ್ದಾರೆ.</p>.<p><strong>ದೂರು ನೀಡಿದ ಸಮೀರ್ ವಾಂಖೆಡೆ</strong></p>.<p>ಇಬ್ಬರು ಪೊಲೀಸ್ ಅಧಿಕಾರಿಗಳು ತಮ್ಮ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದಾರೆ ಎಂದು ಆರೋಪಿಸಿ ಕ್ರೂಸ್ ಡ್ರಗ್ಸ್ ಪ್ರಕರಣದ ಮೇಲ್ವಿಚಾರಣೆ ನಡೆಸುತ್ತಿರುವ ಸಮೀರ್ ವಾಂಖೆಡೆ ಮುಂಬೈ ಪೊಲೀಸ್ ಠಾಣೆಯೊಂದರಲ್ಲಿ ದೂರು ದಾಖಲಿಸಿದ್ದಾರೆ.</p>.<p>ಎನ್ಸಿಬಿ ಅಧಿಕಾರಿಗಳ ಪ್ರಕಾರ, ವಾಂಖೆಡೆ ಅವರು ಇಲ್ಲಿನ ಒಶಿವರ ಉಪನಗರದಲ್ಲಿರುವ ತಮ್ಮ ತಾಯಿಯ ಸಮಾಧಿಗೆ ನಿಯಮಿತವಾಗಿ ಭೇಟಿ ನೀಡುತ್ತಿರುತ್ತಾರೆ. ಇವರ ಚಲನವಲನಗಳನ್ನು ಗಮನಿಸುವುದಕ್ಕಾಗಿ ಒಶಿವರ ಪೊಲೀಸ್ ಠಾಣೆಯ ಇಬ್ಬರು ಅಧಿಕಾರಿಗಳು ಈ ಸ್ಮಶಾನದಲ್ಲಿ ಸಿಸಿಟಿವಿ ಅಳವಡಿಸಿ, ಅದರಿಂದ ದೃಶ್ಯಾವಳಿಗಳನ್ನು ಸಂಗ್ರಹಿಸುತ್ತಿದ್ದಾರೆ.</p>.<p>ಈ ಕುರಿತು ವಾಂಖೆಡೆ ಅವರು ಪೊಲೀಸ್ ಅಧಿಕಾರಿಗಳ ಚಟುವಟಿಕೆ ಕುರಿತು ಮಹಾರಾಷ್ಟ್ರದ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಜೊತೆಗೆ, ಪೊಲೀಸ್ ಠಾಣೆಯೊಂದರಲ್ಲಿ ದೂರು ದಾಖಲಿಸಿದ್ದಾರೆ.</p>.<p>ಅಕ್ಟೋಬರ್ 3 ರಂದು ವಾಂಖೆಡೆ ಮತ್ತು ತಂಡ, ಮುಂಬೈನ ಕರಾವಳಿಯಲ್ಲಿ ಐಶಾರಾಮಿ ಕ್ರೂಸ್ ಹಡಗಿನ ಮೇಲೆ ದಾಳಿ ನಡೆಸಿ, ಮಾದಕ ವಸ್ತುಗಳೊಂದಿಗೆ ಬಾಲಿವುಡ್ ನಟ ಶಾರುಕ್ ಖಾನ್ ಅವರ ಪುತ್ರ ಆರ್ಯನ್ ಮತ್ತಿತರರನ್ನು ಬಂಧಿಸಿದ್ದರು.</p>.<p><strong>ಇದನ್ನೂ ಓದಿ:<a href="https://www.prajavani.net/entertainment/cinema/actor-prakash-rai-quits-telugu-movies-artist-association-874915.html" target="_blank">ಚುನಾವಣೆಯ ಸೋಲಿನ ಬೇಸರ: ತೆಲುಗು ಸಿನಿಮಾ ಕಲಾವಿದರ ಸಂಘ ತೊರೆದ ನಟ ಪ್ರಕಾಶ್ ರಾಜ್</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>; ಮುಂಬೈ ಕ್ರೂಸ್ ಹಡಗಿನ ಡ್ರಗ್ಸ್ ಪ್ರಕರಣದ ವಿಚಾರಣೆ ನಡೆಸುತ್ತಿರುವ ರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ದಳದ (ಎನ್.ಸಿ.ಬಿ) ಅಧಿಕಾರಿ ಸಮೀರ್ ವಾಂಖೆಡೆ ಅವರಿಗೆ ಝಡ್ ಮಾದರಿ ಭದ್ರತೆ ನೀಡಬೇಕು ಎಂಬ ಒತ್ತಾಯಗಳು ಕೇಳಿ ಬಂದಿವೆ.</p>.<p>ಟ್ವಿಟರ್ನಲ್ಲಿ ಇಂದು ಈ ವಿಷಯವಾಗಿ #ZSecurityForSameerWankhede,#Z_Plus_Security_4_Sameerji ಎಂಬ ಹ್ಯಾಶ್ ಟ್ಯಾಗ್ಗಳು ಟ್ರೆಂಡ್ ಆಗಿವೆ. ಸಮೀರ್ ವಾಂಖೆಡೆ ಅವರು ಎನ್.ಸಿ.ಬಿಯ ಮಹಾರಾಷ್ಟ್ರ ವಲಯದ ನಿರ್ದೇಶಕರಾಗಿದ್ದಾರೆ.</p>.<p>‘ಇದೊಂದು ಹೈ ಪ್ರೊಫೈಲ್ ಕೇಸ್ ಆಗಿದ್ದು, ದೊಡ್ಡ ದೊಡ್ಡ ಡ್ರಗ್ಸ್ ಡೀಲರ್ಗಳು, ಪೆಡ್ಲರ್ಗಳು ಸಮೀರ್ ವಾಂಖೆಡೆ ಅವರ ತನಿಖೆಯಿಂದ ಬೆಚ್ಚಿ ಬಿದ್ದಿದ್ದಾರೆ. ಹೀಗಾಗಿ ಡ್ರಗ್ಸ್ ಲೋಕದಿಂದ ಈ ಅಧಿಕಾರಿಗೆ ಏನು ಬೇಕಾದರೂ ಆಗಬಹುದು. ಹೀಗಾಗಿ ಅವರಿಗೆ ಹೆಚ್ಚಿನ ಭದ್ರತೆ ನೀಡಬೇಕು‘ ಎಂದು ಕೇಳಿಕೊಳ್ಳುತ್ತಿದ್ದಾರೆ.</p>.<p>‘ಮುಂಬೈ ಪೊಲೀಸರು ತಮ್ಮ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದಾರೆ’ ಎಂದುಸಮೀರ್ ವಾಂಖೆಡೆ ಆರೋಪಿಸಿದ ಬೆನ್ನಲ್ಲೆ ಈ ಅಭಿಯಾನ ಶುರುವಾಗಿದೆ.</p>.<p>ಏತನ್ಮಧ್ಯೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಹಾರಾಷ್ಟ್ರ ಗೃಹ ಸಚಿವ, ‘ಸಮೀರ್ ವಾಂಖೆಡೆ ನೀಡಿರುವ ದೂರು ನಮ್ಮ ಗಮನಕ್ಕೆ ಬಂದಿಲ್ಲ’ ಎಂದಿದ್ದಾರೆ.</p>.<p><strong>ದೂರು ನೀಡಿದ ಸಮೀರ್ ವಾಂಖೆಡೆ</strong></p>.<p>ಇಬ್ಬರು ಪೊಲೀಸ್ ಅಧಿಕಾರಿಗಳು ತಮ್ಮ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದಾರೆ ಎಂದು ಆರೋಪಿಸಿ ಕ್ರೂಸ್ ಡ್ರಗ್ಸ್ ಪ್ರಕರಣದ ಮೇಲ್ವಿಚಾರಣೆ ನಡೆಸುತ್ತಿರುವ ಸಮೀರ್ ವಾಂಖೆಡೆ ಮುಂಬೈ ಪೊಲೀಸ್ ಠಾಣೆಯೊಂದರಲ್ಲಿ ದೂರು ದಾಖಲಿಸಿದ್ದಾರೆ.</p>.<p>ಎನ್ಸಿಬಿ ಅಧಿಕಾರಿಗಳ ಪ್ರಕಾರ, ವಾಂಖೆಡೆ ಅವರು ಇಲ್ಲಿನ ಒಶಿವರ ಉಪನಗರದಲ್ಲಿರುವ ತಮ್ಮ ತಾಯಿಯ ಸಮಾಧಿಗೆ ನಿಯಮಿತವಾಗಿ ಭೇಟಿ ನೀಡುತ್ತಿರುತ್ತಾರೆ. ಇವರ ಚಲನವಲನಗಳನ್ನು ಗಮನಿಸುವುದಕ್ಕಾಗಿ ಒಶಿವರ ಪೊಲೀಸ್ ಠಾಣೆಯ ಇಬ್ಬರು ಅಧಿಕಾರಿಗಳು ಈ ಸ್ಮಶಾನದಲ್ಲಿ ಸಿಸಿಟಿವಿ ಅಳವಡಿಸಿ, ಅದರಿಂದ ದೃಶ್ಯಾವಳಿಗಳನ್ನು ಸಂಗ್ರಹಿಸುತ್ತಿದ್ದಾರೆ.</p>.<p>ಈ ಕುರಿತು ವಾಂಖೆಡೆ ಅವರು ಪೊಲೀಸ್ ಅಧಿಕಾರಿಗಳ ಚಟುವಟಿಕೆ ಕುರಿತು ಮಹಾರಾಷ್ಟ್ರದ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಜೊತೆಗೆ, ಪೊಲೀಸ್ ಠಾಣೆಯೊಂದರಲ್ಲಿ ದೂರು ದಾಖಲಿಸಿದ್ದಾರೆ.</p>.<p>ಅಕ್ಟೋಬರ್ 3 ರಂದು ವಾಂಖೆಡೆ ಮತ್ತು ತಂಡ, ಮುಂಬೈನ ಕರಾವಳಿಯಲ್ಲಿ ಐಶಾರಾಮಿ ಕ್ರೂಸ್ ಹಡಗಿನ ಮೇಲೆ ದಾಳಿ ನಡೆಸಿ, ಮಾದಕ ವಸ್ತುಗಳೊಂದಿಗೆ ಬಾಲಿವುಡ್ ನಟ ಶಾರುಕ್ ಖಾನ್ ಅವರ ಪುತ್ರ ಆರ್ಯನ್ ಮತ್ತಿತರರನ್ನು ಬಂಧಿಸಿದ್ದರು.</p>.<p><strong>ಇದನ್ನೂ ಓದಿ:<a href="https://www.prajavani.net/entertainment/cinema/actor-prakash-rai-quits-telugu-movies-artist-association-874915.html" target="_blank">ಚುನಾವಣೆಯ ಸೋಲಿನ ಬೇಸರ: ತೆಲುಗು ಸಿನಿಮಾ ಕಲಾವಿದರ ಸಂಘ ತೊರೆದ ನಟ ಪ್ರಕಾಶ್ ರಾಜ್</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>