ತೆಲಂಗಾಣದ ಹಕೀಂಪೇಟ್ನಲ್ಲಿಯ ರಾಷ್ಟ್ರೀಯ ಕೈಗಾರಿಕಾ ಭದ್ರತಾ ಅಕಾಡೆಮಿಯಲ್ಲಿ ನಡೆದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್ಎಫ್) 54ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ‘ಆಂತರಿಕ ಭದ್ರತೆಗೆ ಸಂಬಂಧಿಸಿದ ಹಲವಾರು ಸವಾಲುಗಳನ್ನು ಕಳೆದ ಒಂಬತ್ತು ವರ್ಷಗಳಲ್ಲಿ ಕೇಂದ್ರ ಸರ್ಕಾರವು ಯಶಸ್ವಿಯಾಗಿ ನಿರ್ವಹಿಸಿದೆ. ಪ್ರತ್ಯೇಕತಾವಾದ, ಭಯೋತ್ಪಾದನೆ ಮತ್ತು ದೇಶ ವಿರೋಧಿ ಚಟುವಟಿಕೆಗಳು ದೇಶದ ಯಾವುದೇ ಭಾಗದಲ್ಲಿ ನಡೆದರೂ ಅದನ್ನು ದೃಢವಾಗಿ ನಿಭಾಯಿಸಲಾಗುತ್ತದೆ’ ಎಂದು ಹೇಳಿದರು.