<p><strong>ವಿಶ್ವಸಂಸ್ಥೆ: </strong>ವಿಶ್ವಸಂಸ್ಥೆ ಭದ್ರತಾ ಮಂಡಳಿಯ ನಿರ್ಬಂಧ ಹೇರಿಕೆ ಸಮಿತಿಗಳನ್ನು ಭಾರತ ತರಾಟೆಗೆ ತೆಗೆದುಕೊಂಡಿದೆ. ಸಮಿತಿಗಳು ಪಾರದರ್ಶಕವಾಗಿಲ್ಲ ಎಂದಿರುವ ಭಾರತ, ಅವುಗಳ ಹೊಣೆಗಾರಿಕೆಯ ಕೊರತೆಯನ್ನು ಟೀಕಿಸಿದೆ.</p>.<p>ಉಗ್ರರ ಮೇಲೆ ನಿರ್ಬಂಧ ಹೇರುವಂತೆ ಮಾಡುವ ಮನವಿಗಳನ್ನು ತಿರಸ್ಕರಿಸುವಾಗ ಅದಕ್ಕೆ ಸೂಕ್ತ ಕಾರಣಗಳನ್ನೂ ನೀಡುತ್ತಿಲ್ಲ ಎಂದು ವಿಶ್ವಸಂಸ್ಥೆಗೆ ಭಾರತದ ಕಾಯಂ ಪ್ರತಿನಿಧಿಯಾಗಿರುವ ಸೈಯದ್ ಅಕ್ಬರುದ್ದೀನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಪಾಕಿಸ್ತಾನದ ಭಯೋತ್ಪಾದಕ ಜೆಇಎಂ ಮುಖ್ಯಸ್ಥ ಮಸೂದ್ ಅಜರ್ ಮೇಲೆ ನಿರ್ಬಂಧ ಹೇರುವಂತೆ ಭಾರತ ಮಾಡುತ್ತಿರುವ ಮನವಿಗೆ ಚೀನಾ ಪದೇ ಪದೇ ಅಡ್ಡಗಾಲು ಹಾಕುತ್ತಿರುವುದಕ್ಕೆ ಅವರು ತಿರುಗೇಟು ನೀಡಿದರು. ಆದರೆ ಯಾವ ದೇಶದ ಹೆಸರನ್ನೂ ಅವರು ಪ್ರಸ್ತಾಪಿಸಲಿಲ್ಲ.</p>.<p>‘ಬಹುಪಕ್ಷೀಯತೆ ಬಲಪಡಿಸುವಿಕೆ ಮತ್ತು ವಿಶ್ವಸಂಸ್ಥೆಯ ಪಾತ್ರ’ ಕುರಿತು ನಡೆದ ಸಂವಾದಲ್ಲಿ ಅವರು ಮಾತನಾಡಿದರು. ‘ಸಾರ್ವಜನಿಕ ಸಂಸ್ಥೆಗಳಿಂದ ಪಾದರ್ಶನಕತೆಯನ್ನು ಜನರು ಬಯಸುತ್ತಿರುವ ಕಾಲಘಟ್ಟದಲ್ಲಿ ನಾವಿದ್ದೇವೆ. ವಿಶ್ವಸಂಸ್ಥೆಯ ನಿರ್ಬಂಧ ಹೇರಿಕೆಯಂತಹ ಪ್ರಸಿದ್ಧ ಸಮಿತಿಗಳ ಮೇಲೆ ನಿರೀಕ್ಷೆ ಹೆಚ್ಚೇ ಇರುತ್ತದೆ’ ಎಂದಿದ್ದಾರೆ.</p>.<p>ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಕಾರ್ಯಕ್ಷಮತೆ, ವಿಶ್ವಾಸಾರ್ಹತೆ, ನ್ಯಾಯ ಸಮ್ಮತತೆ ಮತ್ತು ಪ್ರಸ್ತುತತೆಯಂತಹ ಬಿಕ್ಕಟ್ಟುಗಳನ್ನು ಎದುರಿಸುತ್ತಿರುವುದು ಸ್ಪಷ್ಟ ಎಂದು ಅಕ್ಬರುದ್ದೀನ್ ಹೇಳಿದ್ದಾರೆ. ಭದ್ರತಾ ಮಂಡಳಿಯ ಸುಧಾರಣೆ ಸದ್ಯದ ಅಗತ್ಯ ಎಂದೂ ಅಭಿಪ್ರಾಯಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಶ್ವಸಂಸ್ಥೆ: </strong>ವಿಶ್ವಸಂಸ್ಥೆ ಭದ್ರತಾ ಮಂಡಳಿಯ ನಿರ್ಬಂಧ ಹೇರಿಕೆ ಸಮಿತಿಗಳನ್ನು ಭಾರತ ತರಾಟೆಗೆ ತೆಗೆದುಕೊಂಡಿದೆ. ಸಮಿತಿಗಳು ಪಾರದರ್ಶಕವಾಗಿಲ್ಲ ಎಂದಿರುವ ಭಾರತ, ಅವುಗಳ ಹೊಣೆಗಾರಿಕೆಯ ಕೊರತೆಯನ್ನು ಟೀಕಿಸಿದೆ.</p>.<p>ಉಗ್ರರ ಮೇಲೆ ನಿರ್ಬಂಧ ಹೇರುವಂತೆ ಮಾಡುವ ಮನವಿಗಳನ್ನು ತಿರಸ್ಕರಿಸುವಾಗ ಅದಕ್ಕೆ ಸೂಕ್ತ ಕಾರಣಗಳನ್ನೂ ನೀಡುತ್ತಿಲ್ಲ ಎಂದು ವಿಶ್ವಸಂಸ್ಥೆಗೆ ಭಾರತದ ಕಾಯಂ ಪ್ರತಿನಿಧಿಯಾಗಿರುವ ಸೈಯದ್ ಅಕ್ಬರುದ್ದೀನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಪಾಕಿಸ್ತಾನದ ಭಯೋತ್ಪಾದಕ ಜೆಇಎಂ ಮುಖ್ಯಸ್ಥ ಮಸೂದ್ ಅಜರ್ ಮೇಲೆ ನಿರ್ಬಂಧ ಹೇರುವಂತೆ ಭಾರತ ಮಾಡುತ್ತಿರುವ ಮನವಿಗೆ ಚೀನಾ ಪದೇ ಪದೇ ಅಡ್ಡಗಾಲು ಹಾಕುತ್ತಿರುವುದಕ್ಕೆ ಅವರು ತಿರುಗೇಟು ನೀಡಿದರು. ಆದರೆ ಯಾವ ದೇಶದ ಹೆಸರನ್ನೂ ಅವರು ಪ್ರಸ್ತಾಪಿಸಲಿಲ್ಲ.</p>.<p>‘ಬಹುಪಕ್ಷೀಯತೆ ಬಲಪಡಿಸುವಿಕೆ ಮತ್ತು ವಿಶ್ವಸಂಸ್ಥೆಯ ಪಾತ್ರ’ ಕುರಿತು ನಡೆದ ಸಂವಾದಲ್ಲಿ ಅವರು ಮಾತನಾಡಿದರು. ‘ಸಾರ್ವಜನಿಕ ಸಂಸ್ಥೆಗಳಿಂದ ಪಾದರ್ಶನಕತೆಯನ್ನು ಜನರು ಬಯಸುತ್ತಿರುವ ಕಾಲಘಟ್ಟದಲ್ಲಿ ನಾವಿದ್ದೇವೆ. ವಿಶ್ವಸಂಸ್ಥೆಯ ನಿರ್ಬಂಧ ಹೇರಿಕೆಯಂತಹ ಪ್ರಸಿದ್ಧ ಸಮಿತಿಗಳ ಮೇಲೆ ನಿರೀಕ್ಷೆ ಹೆಚ್ಚೇ ಇರುತ್ತದೆ’ ಎಂದಿದ್ದಾರೆ.</p>.<p>ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಕಾರ್ಯಕ್ಷಮತೆ, ವಿಶ್ವಾಸಾರ್ಹತೆ, ನ್ಯಾಯ ಸಮ್ಮತತೆ ಮತ್ತು ಪ್ರಸ್ತುತತೆಯಂತಹ ಬಿಕ್ಕಟ್ಟುಗಳನ್ನು ಎದುರಿಸುತ್ತಿರುವುದು ಸ್ಪಷ್ಟ ಎಂದು ಅಕ್ಬರುದ್ದೀನ್ ಹೇಳಿದ್ದಾರೆ. ಭದ್ರತಾ ಮಂಡಳಿಯ ಸುಧಾರಣೆ ಸದ್ಯದ ಅಗತ್ಯ ಎಂದೂ ಅಭಿಪ್ರಾಯಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>