ಅದಕ್ಕೆ ಪ್ರತಿಕ್ರಿಯಿಸಿದ ಕರ್ನಾಟಕದ ಅಧಿಕಾರಿಗಳು, ‘ವನ್ಯಜೀವಿಗಳಿಗೆ ತೊಂದರೆ ಆಗಬಾರದೆಂಬ ಕಾರಣಕ್ಕೆ ರಾತ್ರಿ ವೇಳೆ ವಾಹನಗಳ ಸಂಚಾರವನ್ನ ನಿಷೇಧಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ಅದರ ವಿರುದ್ಧವಾಗಿ ನಡೆದುಕೊಂಡರೆ, ನ್ಯಾಯಾಂಗ ನಿಂದನೆ ಆಗುತ್ತದೆ. ಹೀಗಾಗಿ, ಯಥಾಸ್ಥಿತಿ ಕಾಯ್ದುಕೊಳ್ಳಲಿದ್ದೇವೆ. ನೀವು (ಕೇರಳ) ಬೇಕಾದರೆ, ಸುಪ್ರೀಂ ಕೋರ್ಟ್ನಲ್ಲೇ ಪ್ರಶ್ನಿಸಿ’ ಎಂದರು. ಈ ನಿರ್ಧಾರಕ್ಕೆ ತಮಿಳುನಾಡು ಅಧಿಕಾರಿಗಳು ಧ್ವನಿಗೂಡಿಸಿದರು.