ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರಿನ ಮೇಲೆ ಉರುಳಿದ ಲಾರಿ: ವಕೀಲ ಸಾವು

Last Updated 26 ಜನವರಿ 2018, 20:14 IST
ಅಕ್ಷರ ಗಾತ್ರ

ಬೆಂಗಳೂರು: ಯಲಹಂಕದ ಅಲ್ಲಾಳಸಂದ್ರದ ಮೇಲ್ಸೇತುವೆ ಬಳಿ ಶುಕ್ರವಾರ ಕಾರಿನ ಮೇಲೆ ಲಾರಿ ಉರುಳಿ ಬಿದ್ದಿದ್ದರಿಂದ ರಂಜಿತ್ ಕುಮಾರ್ (40) ಎಂಬುವರು ಮೃತಪಟ್ಟಿದ್ದಾರೆ.

ಜಕ್ಕೂರಿನ ತಲಕಾವೇರಿ ಲೇಔಟ್‌ ನಿವಾಸಿಯಾದ ಅವರು ವಕೀಲರಾಗಿ ಕೆಲಸ ಮಾಡುತ್ತಿದ್ದರು. ರಾತ್ರಿ 8 ಗಂಟೆ ಸುಮಾರಿಗೆ ಕೆಲಸ ಮುಗಿಸಿಕೊಂಡು ಮನೆಗೆ ಹೋಗುವಾಗ ಅಪಘಾತ ಸಂಭವಿಸಿದೆ.

ಯೂ ಟರ್ನ್ ತೆಗೆದುಕೊಳ್ಳಲು ಲಾರಿ ಚಾಲಕ ಮುಂದಾಗಿದ್ದರು. ಈ ವೇಳೆ ನಿಯಂತ್ರಣ ತಪ್ಪಿದ ಲಾರಿ, ಪಕ್ಕದಲ್ಲಿ ತೆರಳುತ್ತಿದ್ದ ರಂಜಿತ್ ಅವರ ಕಾರಿನ ಮೇಲೆ ಬಿದ್ದಿದೆ. ಲಾರಿಯಲ್ಲಿದ್ದ ಸಾವಿರಾರು ಕೆ.ಜಿ. ತೂಕದ ಪೇಪರ್‌ ರೋಲ್‌ಗಳು ಸಹ ಕಾರಿನ ಮೇಲೆ ಬಿದ್ದಿವೆ. ಇದರಿಂದ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ ಎಂದು ಯಲಹಂಕ ಸಂಚಾರ ಪೊಲೀಸರು ತಿಳಿಸಿದರು.

ಕಾರಿನಲ್ಲಿ ಸಿಲುಕಿದ್ದ ರಂಜಿತ್ ಅವರನ್ನು ಹೊರಗೆಳೆದು ಬ್ಯಾಟರಾಯನಪುರದ ಪ್ರೊಲೈಫ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು ಎಂದು ಮಾಹಿತಿ ನೀಡಿದರು.

ಸಂಚಾರ ದಟ್ಟಣೆ: ‘ಮುಖ್ಯರಸ್ತೆಯಲ್ಲಿ ಲಾರಿ ಉರುಳಿ ಬಿದ್ದಿದ್ದರಿಂದ ವಾಹನಗಳ ಸಂಚಾರಕ್ಕೆ ತೊಂದರೆಯಾಗಿತ್ತು. ಸ್ಥಳದಲ್ಲಿ ಸಾಕಷ್ಟು ಜನ ಸೇರಿದ್ದರಿಂದ ಕೆಲ ಹೊತ್ತು ಸಂಚಾರ ದಟ್ಟಣೆ ಉಂಟಾಗಿತ್ತು. ಎರಡು ಕ್ರೇನ್‌ಗಳ ಮೂಲಕ ಲಾರಿ ಹಾಗೂ ಕಾರನ್ನು ಸ್ಥಳಾಂತರ ಮಾಡಿ ಸುಗಮ ಸಂಚಾರಕ್ಕೆ ಅನುವು ಮಾಡಿದೆವು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT